ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 DECEMBER 2023
SHIMOGA : ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಈ ಆದೇಶ ಜಾರಿಗೆ ಬರಲಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.
ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಶಿವಮೊಗ್ಗದ ಪದವೀಧರ ಸಹಕಾರ ಸಂಘದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾವುದೆ ಶಿಕ್ಷಣ ಸಂಸ್ಥೆಯಲ್ಲು ಮಕ್ಕಳ ಕೈಯಲ್ಲಿ ಶೌಚ ಸ್ವಚ್ಚತೆ ಮಾಡಿಸುವಂತಿಲ್ಲ. ಹಾಗೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇನ್ಮುಂದೆ ಶಾಲಾ ಸ್ವಚ್ಚತೆಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ. ಇನ್ನು, ಎಲ್ಲಾ ಶಾಲೆಯಲ್ಲೂ ಮುಂದಿನ ವರ್ಷದಿಂದ ಮಕ್ಕಳು ನೆಲದ ಮೇಲೆ ಕೂಳಿತು ಪಾಠ ಕೇಳುವಂತಿಲ್ಲ. 1 ರಿಂದ 10ನೇ ತರಗತಿ ವರೆಗೆ ಮಕ್ಕಳು ತರಗತಿಗಳಲ್ಲಿ ಬೆಂಚ್ ಮೇಲೆಯೇ ಕುಳಿತು ಪಾಠ ಕೇಳಬೇಕು. ಇದು ನಮ್ಮ ಇಲಾಖೆಯ ಆದೇಶ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರೋಬೋ ರೇಸ್, ಹೇಗಿತ್ತು ರೇಸ್? ಇಲ್ಲಿದೆ ಫೋಟೊ ಸಹಿತ ವರದಿ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















