ಶಿವಮೊಗ್ಗದಲ್ಲಿ ದನ ಮೇಯಿಸುತ್ತಿದ್ದವನ ಮೇಲೆ ಆರು ದುಷ್ಕರ್ಮಿಗಳಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 DECEMBER 2023

SHIMOGA : ದನ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಆರು ಮಂದಿ ದಾಳಿ ನಡೆಸಿ ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಆತನ ಮೇಲೆ ಹಲ್ಲೆ ನಡೆಸಿದ್ದು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಡಿ.22ರಂದು ಸಂಜೆ ನದೀಮ್‌ ಅಹಮದ್‌ ಎಂಬುವವರು ಸೋಮಿನಕೊಪ್ಪದ ಜಮೀನು ಒಂದರಲ್ಲಿ ದನ ಮೇಯಿಸುತ್ತಿದ್ದರು. ಈ ಸಂದರ್ಭ ಸ್ಪ್ಲೆಂಡರ್‌ ಬೈಕ್‌ ಮತ್ತು ಟಿವಿಎಸ್‌ ಎಕ್ಸ್‌ಎಲ್‌ನಲ್ಲಿ ಆರು ಮಂದಿ ಆಗಮಿಸಿದ್ದು, ನದೀಮ್‌ ಅಹಮದ್‌ ಬಳಿ ಬಂದಿದ್ದಾರೆ. ಅವರ ಕೈಯಲ್ಲಿದ್ದ 16 ಸಾವಿರ ರೂ. ಮೌಲ್ಯದ ವೀವೋ ಕಂಪನಿಯ ಮೊಬೈಲ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ. ನದೀಮ್‌ ಅಹಮದ್‌ ಮೊಬೈಲ್‌ ಬಿಗಿಯಾಗಿ ಹಿಡಿದಿದ್ದರಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸಿನಲ್ಲಿ ಮೊಬೈಲ್‌ ಬಳಸಿದ ಚಾಲಕ, ಫೋಟೊ ತೆಗೆದ ಪ್ರಯಾಣಿಕ, ಮುಂದೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment