ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 DECEMBER 2023
BHADRAVATHI : ಹುತ್ತಾ ಕಾಲೋನಿಯ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಭದ್ರಾವತಿ ಸೇರಿದಂತೆ ವಿವಿಧೆಡೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.
ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಉಪಾದ್ಯಾಯ ಮತ್ತು ಸಂಗಡಿಗ ಪೂಜಾ ಅರ್ಚಕರು ಧಾರ್ಮಿಕ ವಿಧಿಗಳನ್ನು ಪೂರೈಸಿ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಿ ಆರತಿ ಬೆಳಗಿದರು. ನೆರೆದಿದ್ದ ಭಕ್ತರು ಘೋಷಣೆ ಮೊಳಗಿಸಿದರು. ಬಳಿಕ ಭಕ್ತರು ತೇರನ್ನು ಎಳೆಯುವುದರ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.
ಸಮೀಪದ ಸರ್ಎಂವಿ ಆಟೊ ನಿಲ್ದಾಣ ಮುಂಭಾಗದವರೆಗೆ ರಥೋತ್ಸವ ನೆರವೇರಿಸಲಾಯಿತು. ದಾರಿಯುದ್ದಕ್ಕೂ ಭಕ್ತರು ಹರಕೆಯ ಪದಾರ್ಥಗಳನ್ನು ರಥದ ಮೇಲೆ ತೂರಿ ಹರಕೆ ತೀರಿಸಿದರು.
ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ಕಾಂಗ್ರೆಸ್ ಮುಖಂಡ ಎಚ್.ಸಿ.ದಾಸೇಗೌಡ, ಕಬಡ್ಡಿ ಕರಿಯಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ – ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















