ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 DECEMBER 2023
SAGARA : ಶಿವಮೊಗ್ಗ – ಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಗುಂಡಿಗಳು ಬಾಯ್ತೆರೆದಿವೆ. ಸ್ವಲ್ಪ ಯಾಮಾರಿದರು ವಾಹನ ಸವಾರರಿಗೆ ಪ್ರಾಣಾಪಾಯ ತಪ್ಪಿದ್ದಲ್ಲ.
ಎಲ್ಲೆಲ್ಲಿ ಗುಂಡಿಗಳಿವೆ?
ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುವವರಿಗೆ ಐಗಿನಬೈಲು ಸಮೀಪ ಸೇತುವೆ ಮೇಲೆ ಬೃಹತ್ ಗುಂಡಿ ಕಾಣಸಿಗುತ್ತದೆ. ಡಾಂಬರ್ ಕಿತ್ತು ಹೋಗಿದ್ದು ಸೇತುವೆಗೆ ಅಳವಡಿಸಿರುವ ಕಂಬಿಗಳು ಗೋಚರಿಸುತ್ತಿವೆ. ಇನ್ನು, ಆನಂದಪುರದಲ್ಲಿಯು ಹೆದ್ದಾರಿ ಮೇಲೆ ಗುಂಡಿಗಳಿವೆ. ಆಚಾಪುರ, ಗಿಳಾಲಗುಂಡಿ, ಕೋಣೆ ಹೊಸೂರು, ಸನ್ನಿವಾಸದ ಬಳಿ ಹೆದ್ದಾರಿಯಲ್ಲಿ ಗುಂಡಿಗಳಿವೆ. ಅದರಲ್ಲೂ ಕೋಣೆ ಹೊಸೂರು ಸಮೀಪ ಸಾಲಾಗಿ ಗುಂಡಿಗಳಿವೆ.
ಸಾಗರದಿಂದ ಐಗಿನಬೈಲು ತನಕ ಹೆದ್ದಾರಿ ಚನ್ನಾಗಿದೆ. ಇದೆ ಕಲ್ಪನೆಯಲ್ಲಿಯೇ ವಾಹನ ಸವಾರರು ವೇಗ ಹೆಚ್ಚಿಸಿದರೆ ದಿಢೀರ್ ಎದುರಾಗುವ ಗುಂಡಿಗಳು ಜೀವಕ್ಕೆ ಕುತ್ತು ತರುತ್ತವೆ. ಗುಂಡಿಗಳನ್ನು ತಪ್ಪಿಸಲು ಹೋಗಿ ಹಲವು ಅಪಘಾತಗಳು ಕೂಡ ಸಂಭವಿಸಿವೆ ಅನ್ನುತ್ತಾರೆ ಸ್ಥಳೀಯರು.
ರಸ್ತೆ ಮಧ್ಯದಲ್ಲಿ ಬಿರುಕು..!
ಇನ್ನು, ಚೋರಡಿ ಮತ್ತು ಕುಂಸಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ಬಿರುಕು ಬಿಟ್ಟಂತಾಗಿದೆ. ದ್ವಿಚಕ್ರ ವಾಹನ ಸವಾರರ ಪಾಲಿಗಂತು ಈ ಬಿರುಕು ಕಂಟವಾಗಿದೆ. ಹೆದ್ದಾರಿಯ ಗುಂಡಿಗಳು, ಬಿರುಕುಗಳನ್ನು ಬಂದ್ ಮಾಡಿದರೆ ವಾಹನ ಸವಾರರು ನಿಶ್ಚಿಂತೆಯಿಂದ ಈ ಮಾರ್ಗದಲ್ಲಿ ಓಡಾಡಬಹುದಾಗಿದೆ.
ಇದನ್ನೂ ಓದಿ – ವಾಹನ ಸವಾರರ ಹುಷಾರ್, ಶಿವಮೊಗ್ಗದ ಈ ರಸ್ತೆಯಲ್ಲಿ ನಿಮ್ಮ ಕೈ, ಕಾಲುಗಳಿಗೆ ನೀವೆ ಜವಾಬ್ದಾರರು
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





