SHIVAMOGGA LIVE NEWS | 7 JANUARY 2024
SORABA : ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಮೃತಪಟ್ಟಿದೆ. ಸೊರಬ ತಾಲೂಕು ಅಂದವಳ್ಳಿ ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬುವರ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಜಮೀನಿಗೆ ಬಂದಿದ್ದ ಕಾಡುಕೋಣ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದಿತ್ತು.
ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕಾಡುಕೋಣದ ದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಡಿಎಫ್ಒ ಸಂತೋಷ್ ಕೆಂಚಪ್ಪ, ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಜಾವಿದ್ ಬಾಷಾ ಅಂಗಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್ ಸಮೀಪ ಒಬ್ಬ ಅರೆಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200