ಸಿಗಂದೂರು ಜಾತ್ರೆಗೆ ಸಿದ್ಧತೆ ಪೂರ್ಣ, ಮೂಲ ಸ್ಥಾನದಲ್ಲಿ ಪೂಜೆ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JANUARY 2024

SIGANDUR : ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜ.14 ಮತ್ತು 15ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆಗಿದೆ.

ರಘುಪತಿ ಶಾಂತಿ ಮತ್ತು ಪುರೋಹಿತರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಭಕ್ತರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೂರು ಹೋಬಳಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸ್ವಯಂ ಪ್ರೇರಣೆಯಿಂದ ಶ್ರಮದಾನದ ಮೂಲಕ ರಸ್ತೆ ಸ್ವಚ್ಛತೆ, ತಳಿರು ತೋರಣದಿಂದ ಅಲಂಕಾರ ಮಾಡಿವೆ.

ಇದನ್ನೂ ಓದಿ – ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ

ಮೂಲ ಸ್ಥಾನದಲ್ಲಿ ಜಾತ್ರೆಗೆ ಸಿದ್ಧತೆ

ದೇವಿಯ ಮೂಲಸ್ಥಾನವಾದ ಸೀಗೆಕಣಿವೆಯಲ್ಲಿ ಜಾತ್ರೆ ಚಾಲನೆಗೆ ಸಿಗಲಿದೆ. ಈಗಾಗಲ ಪೂಜೆ ಕೈಂಕರ್ಯಗಳು ಆರಂಭವಾಗಿದೆ. ಪೂರ್ಣ ಕುಂಭ ಸ್ವಾಗತಕ್ಕೆ ರಸ್ತೆ ಸಮತಟ್ಟು ಮತ್ತು ಹೋಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಕ್ತಾದಿಗಳಿಗೆ ಕುಡಿಯುವ ನೀರು ಮತ್ತು ಜನಜಂಗುಳಿ ಉಂಟಾಗದಂತೆ ದೇವಾಲಯದ ಪ್ರಾಂಗಣದ ಸುತ್ತ ವ್ಯವಸ್ಥೆ ಮಾಡಲಾಗಿದೆ. ಗಣ್ಯರ ಪ್ರವೇಶಕ್ಕೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. ಸೇವಾ ಕಾರ್ಯಕರ್ತರ ತಂಡವು ಹಗಲಿರುಳು ಶ್ರಮಿಸುತ್ತಿದೆ. ಭಕ್ತಾದಿಗಳು ಜಾತ್ರಾ ಮಹೋತ್ಸವದ ಯಶಸ್ಸಿಗೆ ಸಹಕರಿಸಬೇಕು.ಡಾ. ರಾಮಪ್ಪ, ಸಿಗಂದೂರು ಕ್ಷೇತ್ರದ ಅನುವಂಶಿಕ ಧರ್ಮದರ್ಶಿ

Sigandur-Jathre-Preparation

Sigandur temple jathre

Sigandur temple jathre

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment