ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JANUARY 2024
SHIMOGA : ರಾಜ್ಯ ಸರ್ಕಾರ ಯಾವುದೆ ಕ್ಷಣದಲ್ಲಿ ನಿಗಮ, ಮಂಡಳ ನೇಮಕಾತಿ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಇದರ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ಪಕ್ಕಾ ಆಗಿದೆ ಎಂದು ಅಭಿನಂದನೆ ಸಲ್ಲಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲು ಇವರ ಫೋಟೊಗಳು ಹರಿದಾಡುತ್ತಿವೆ.
ಕುತೂಹಲ ಮೂಡಿಸಿದ್ದ ನೇಮಕಾತಿ
ಸಚಿವ ಸ್ಥಾನ ವಂಚಿತ ಶಾಸಕರು, ಪ್ರಮುಖ ಕಾರ್ಯಕರ್ತರು ನಿಗಮ, ಮಂಡಳಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಸರ್ಕಾರ ರಚನೆಯಾದಾಗಿನಿಂದ ಪಕ್ಷದ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದರು. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಿಗಮ, ಮಂಡಳಿಗೆ ನೇಮಕ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೆ ಕ್ಷಣದಲ್ಲಿ ಪಟ್ಟಿ ಪ್ರಕಟವಾಗುವ ಸಂಭವವಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಸೆಕೆಂಡ್ನಲ್ಲಿಯೇ ನಿಗಮ, ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಲಿದೆ. 36 ಶಾಸಕರು, 39 ಕಾರ್ಯಕರ್ತರ ಹೆಸರನ್ನು ಪ್ರಕಟಿಸಲಾಗುವುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ. ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು.ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಶಿವಮೊಗ್ಗದಲ್ಲಿ ಐವರ ಹೆಸರು ಮುನ್ನಲೆಗೆ
ಈ ಬೆಳವಣಿಗೆ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯ ಐವರ ಹೆಸರು ಮುನ್ನಲೆಗೆ ಬಂದಿದೆ. ಶಾಸಕರಾದ ಬಿ.ಕೆ.ಸಂಗಮೇಶ್ವರ ಮತ್ತು ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಶಿವಮೊಗ್ಗ ಗ್ರಾಮಾಂತರ ಕಾಂಗ್ರೆಸ್ ನಾಯಕಿ ಪಲ್ಲವಿ ಅವರನ್ನು ನಿಗಮ, ಮಂಡಳಿಗೆ ನೇಮಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವರ ಬೆಂಬಲಿಗರು ಫೇಸ್ಬುಕ್, ವಾಟ್ಸಪ್ನಲ್ಲಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಸ್ಥಾನ ವಂಚಿತರಿಗೆ ತಳಮಳ
ಇತ್ತ ನಿಗಮ, ಮಂಡಳಿ ಮೇಲೆ ಕಣ್ಣಿಟ್ಟಿದ್ದ ಇತರೆ ನಾಯಕರಲ್ಲಿ ತಳಮಳ ಶುರುವಾಗಿದೆ. ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೋ ಇಲ್ಲವೊ ಎಂದು ಖಚಿತಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಸದ್ಯ, ರಾಜ್ಯ ಕಾಂಗ್ರೆಸ್ನಲ್ಲಿ ನಿಗಮ, ಮಂಡಳಿ ನೇಮಕಾತಿ ವಿಚಾರ ತೀವ್ರ ಕುತೂಹಲ ಮೂಡಿಸಿದೆ.
ಇದನ್ನೂ ಓದಿ – SHIMOGA CITY – ಇವತ್ತಿನ ಟಾಪ್ 10 ಸುದ್ದಿಗಳು | 18 ಜನವರಿ 2024
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





