ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JANUARY 2024
SHIMOGA : ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಲಪ್ಪ ಹೇಳಿದ 3 ಪ್ರಮುಖಾಂಶ
ಕೇಂದ್ರ ಸರ್ಕಾರದ ವಿಕಸಿತ ಭಾರತ ಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಅಧಿಕಾರಿಗಳ ಹೊಣೆಗಾರಿಕೆ. ಹೀಗಾಗಿ ವಿಕಸಿತ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅದನ್ನು ಸಹಿಸದೆ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಫಲಾನುಭವಿಗಳಿಗೆ ತಲುಪಿರುವ ಬಗ್ಗೆ ಹಾಗೂ ತಲುಪಿಸುವ ಬಗ್ಗೆಯೂ ವಿಕಸಿತ ಭಾರತ ಯಾತ್ರೆಯನ್ನು ಎಲ್ಲ ಗ್ರಾಪಂಗಳಲ್ಲಿ ನಡೆಸಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಾಗ ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಕ್ಯಾಬಿನೆಟ್ ಸಚಿವರು ಸಂವಿಧಾನದ ವಿರುದ್ಧವಾಗಿ ನಡೆದುಕೊಂಡಿದ್ದಾರೆ.
ಇದನ್ನೂ ಓದಿ – ಪೆನ್ಸಿಲ್ ಲೆಡ್ನಲ್ಲಿ 1 ಸೆಂಟಿ ಮೀಟರ್ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?
ಸರ್ಕಾರಿ ನೌಕರರನ್ನು ವಿಕಸಿತ ಭಾರತ ಯಾತ್ರೆಗೆ ಕಳಿಸಿದಂತೆ ಜಿಲ್ಲಾ ಪಂಚಾಯಿತಿ ಸಿಇಒಗೆ ಸಚಿವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ಮಾಡುತ್ತೇವೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬಾರದೆಂದರೆ ಅದನ್ನು ಸಚಿವರು ಸ್ಪಷ್ಟಪಡಿಸಲಿ. ಸಚಿವ ಮಧು ಬಂಗಾರಪ್ಪ ದುಂಡಾವರ್ತನೆ ಬಿಡಬೇಕು. ಶಿಷ್ಠಾಚಾರ ಗೊತ್ತಿಲ್ಲದೆ ಇದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಬಳಿ ತಿಳಿದುಕೊಳ್ಳಲಿ. ಸಂಪುಟದಿಂದ ಮಧು ಬಂಗಾರಪ್ಪ ಅವರನ್ನು ಕೂಡಲೆ ಕೈಬಿಡಬೇಕು.
ಇದನ್ನೂ ಓದಿ – ಇನ್ಮುಂದೆ ಶಿವಮೊಗ್ಗದ ಫ್ರೀಡಂ ಪಾರ್ಕ್ಗೆ ಹೊಸ ಹೆಸರು, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ರಾಜ್ಯ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಡಾ. ರಾಜನಂದಿನಿ ಕಾಗೋಡು ಸೇರಿದಂತೆ ಪ್ರಮುಖರು ಸುದ್ದಿಗೋಷ್ಠಿಯಲ್ಲಿದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















