ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JANUARY 2024
SHIMOGA : ಎರಡು ಲಕ್ಷ ರೂ.ವರೆಗೆ ಸುಲಭವಾಗಿ ಸಾಲ ದೊರೆಯಲಿದೆ ಎಂದು ಫೇಸ್ಬುಕ್ನಲ್ಲಿದ್ದ ಜಾಹೀರಾತು ನಂಬಿ ಕರೆ ಮಾಡಿದ್ದ ಭದ್ರಾವತಿ ಯುವಕನಿಗೆ (ಹೆಸರು ಗೌಪ್ಯ) 36,500 ರೂ. ವಂಚನೆಯಾಗಿದೆ.
ಜಾಹೀರಾತಿನಲ್ಲಿದ್ದ ಮೊಬೈಲ್ ನಂಬರ್ಗೆ ಭದ್ರಾವತಿಯ ಯುವಕ ಕರೆ ಮಾಡಿದ್ದ. ಅತ್ತ ಕಡೆಯಿಂದ ಮಾತನಾಡಿದ ವ್ಯಕ್ತಿ ತಾವು ಮಂಗಳೂರಿನ ಫೈನಾನ್ಸ್ ಸಂಸ್ಥೆ ಎಂದು ಪರಿಚಯಿಸಿಕೊಂಡಿದ್ದ. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ವಿವರ, ಪ್ಯಾನ್ ಕಾರ್ಡ್ ವಾಟ್ಸಪ್ ಮಾಡುವಂತೆ ತಿಳಿಸಿದ್ದ. ದಾಖಲೆಗಳನ್ನು ಕಳುಹಿಸುತ್ತಿದ್ದಂತೆ ಸಾಲ ಸ್ಯಾಂಕ್ಷನ್ ಆಗಿದೆ. ಇದರ ಪ್ರೋಸೆಸ್ ಫೀಜ್, ಟ್ಯಾಕ್ಸ್ ಸೇರಿದಂತೆ ನಾನಾ ಕಾರಣಕ್ಕೆ 36,500 ರೂ. ಪಾವತಿಸಬೇಕು ಎಂದು ತಿಳಿಸಿದ್ದ.
ಇದನ್ನೂ ಓದಿ – ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ
ಇದನ್ನು ನಂಬಿದ ಭದ್ರಾವತಿ ಯುವಕ 36,500 ರೂ. ಪಾವತಿಸಿದ್ದ. ಆದರೂ ಸಾಲದ ಹಣ ಬಾರದಿದ್ದಾಗ ವಂಚನೆಗೊಳಗಾಗಿದ್ದು ಅರಿವಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















