ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 JANUARY 2024

SHIMOGA : ಸವಳಂಗ ರಸ್ತೆಯ ಉಷಾ ನರ್ಸಿಂಗ್‌ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪಿದೆ. ಅಷ್ಟರಲ್ಲೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದರಿಂದ ಸುತ್ತಮುತ್ತಲ ಬಡಾವಣೆ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ರೈಲುಗಳು ಬಂದಾಗಲೆಲ್ಲೆ ಸವಳಂಗ ರಸ್ತೆಯಲ್ಲಿ ರೈಲ್ವೆ ಗೇಟ್‌ ಬಂದ್‌ ಮಾಡಲಾಗುತ್ತಿತ್ತು. ಇದರಿಂದ ನವುಲೆ ಕಡೆಯ ರಸ್ತೆ ಮತ್ತು ಉಷಾ ನರ್ಸಿಂಗ್‌ ಹೋಂ ಕಡೆಗೆ ವಾಹನ ದಟ್ಟಣೆ ಹೆಚ್ಚಳವಾಗುತ್ತಿತ್ತು. ಈ ಭಾಗದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಜನರು ಒತ್ತಾಯಿಸಿದ್ದರು. ಈಗ ಮೇಲ್ಸೇತುವೆ ಸಿದ್ದವಾಗಿದ್ದು, ವಾಹನ ಸಂಚಾರಕ್ಕೆ ಮುಕ್ತವಾಗಿದೆ.

ವಾಹನ ಸಂಚಾರ ಆರಂಭ

ಸುಮಾರು ಎರಡು ವರ್ಷದಿಂದ ಮೇಲ್ಸೇತುವೆ ಕಾಮಗಾರಿ ನಡೆಯುತಿತ್ತು. ಜ.26ರಂದು ಸಂಸದ ಬಿ.ವೈ.ರಾಘವೇಂದ್ರ ಸೇತುವೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು. ವಿಷಯ ತಿಳಿಯುತ್ತಿದ್ದಂತೆ ಬಹುತೇಕ ವಾಹನಗಳು ಸೇತುವೆ ಮೇಲೆ ಸಂಚಾರ ಆರಂಭಿಸಿವೆ. ಶಿಕಾರಿಪುರ, ಸವಳಂಗ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್ಸುಗಳು, ಶಾಲೆ, ಕಾಲೇಜು ಬಸ್ಸುಗಳು, ಲಾರಿಗಳು ಸೇತುವೆ ಮುಖಾಂತರ ಸವಳಂಗ ರಸ್ತೆಯಲ್ಲಿ ಸಂಚರಿಸುತ್ತಿವೆ.

Savalanga Road Bridge near usha nursing home in Shimoga

ಇನ್ನೂ ಕಾಮಗಾರಿ ಬಾಕಿ ಇದೆ

ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದರೂ ಸೇತುವೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಸೇತುವೆಯ ಎರಡು ಬದಿಯಲ್ಲೂ ಡಾಂಬರೀಕರಣ ಮುಗಿದಿಲ್ಲ. ಜೆಲ್ಲಿ ಕಲ್ಲುಗಳನ್ನು ಹಾಸಲಾಗಿದೆ. ದ್ವಿಚಕ್ರ ವಾಹನ ಸವಾರರ ಪಾಲಿಗೆ ಈ ಜೆಲ್ಲಿ ಕಲ್ಲುಗಳು ಅಪಾಯಕಾರಿಯಾಗಿ ಪರಿಣಮಿಸಿವೆ. ಬೀದಿ ದೀಪಗಳಿಗೆ ವಿದ್ಯುತ್ ಸಂಪರ್ಕ, ಫುಟ್‌ಪಾತ್‌ಗಳಲ್ಲಿ ಸ್ಲಾಬ್‌ಗಳ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳು ಇನ್ನೂ ಬಾಕಿ ಇದೆ. ಇವುಗಳ ಕಾರ್ಯ ಇನ್ನೂ ನಡೆಯುತ್ತಿದೆ.

Savalanga Road Bridge near usha nursing home in Shimoga

ಸುತ್ತಮುತ್ತಲ ವಾಸಿಗಳ ನಿಟ್ಟುಸಿರು

ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ನವುಲೆ ಕಡೆಯಿಂದ ಬರುವ ವಾಹನಗಳು ಮತ್ತು ಉಷ ನರ್ಸಿಂಗ್‌ ಹೋಂ ಕಡೆಯಿಂದ ತೆರಳುವ ವಾಹನಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ದ್ವಿಚಕ್ರ ವಾಹನಗಳು, ಕಾರುಗಳು ರವೀಂದ್ರ ನಗರದ ವಿವಿಧ ಅಡ್ಡರಸ್ತೆಗಳ ಮೂಲಕ ರೈಲ್ವೆ ಗೇಟ್‌ ದಾಟುತ್ತಿದ್ದವು. ಭಾರಿ ವಾಹನಗಳು ಬೊಮ್ಮನಕಟ್ಟೆ ಮುಖ್ಯರಸ್ತೆ, ಅಶ್ವಥನಗರದ ಮೂಲಕ ಸವಳಂಗ ರಸ್ತೆ ತಲುಪುತ್ತಿದ್ದವು. ಇದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ವಾಹನಗಳ ಸಂಖ್ಯೆ ಹೆಚ್ಚಾಗಿದ್ದರಿಂದ ಧೂಳು ಹೆಚ್ಚಿತ್ತು. ಹೊಸ ಸೇತುವೆ ಮೇಲೆ ವಾಹನ ಸಂಚಾರ ಆರಂಭವಾಗುತ್ತಿದ್ದಂತೆ ಈ ಭಾಗದಲ್ಲಿ ವಾಹನ ಸಂಚಾರ ತಗ್ಗಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಧೂಳು, ಭಾರಿ ಶಬ್ದದಿಂದ ಮುಕ್ತಿ ಪಡೆದ ಸಮಾಧಾನ ಪಡುತ್ತಿದ್ದಾರೆ.

ravindra nagara road in Shimoga

ಇದನ್ನೂ ಓದಿ – ಸಂಗಮೇಶ್ವರ, ಬೇಳೂರಿಗೆ ನಿಗಮದ ಅಧ್ಯಕ್ಷ ಸ್ಥಾನ, ಯಾವ ನಿಗಮ? ಅವುಗಳ ಜವಾಬ್ದಾರಿ ಏನು?

Savalanga Road Bridge near usha nursing home in Shimoga

Savalanga Road Bridge near usha nursing home in Shimoga

Savalanga Road Bridge near usha nursing home in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2024

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment