ದಲಿತ ಸಂಘರ್ಷ ಸಮಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಪ್ರೊ. ಕೃಷ್ಣಪ್ಪ ಸ್ಮರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 JANUARY 2024

SHIMOGA : ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿ ರಾಜ್ಯದಲ್ಲಿ ಶೋಷಿತರ ಆತ್ಮವಿಶ್ವಾಸವನ್ನು ಹೆಚ್ಚಿಸಿದ ಕೀರ್ತಿ ಪ್ರೊ.ಬಿ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕದ ದಲಿತ ಚಳುವಳಿಗೆ 50ರ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಘಟನೆ ಮೂಲಕ ಸಾಮಾಜಿಕ ಕಳಕಳಿ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ನಡೆಸಿದ ಮಹಾನ್ ಚೇತನ ಪ್ರೊ. ಬಿ.ಕೃಷ್ಣಪ್ಪ. ಅವರ ವಿಚಾರಧಾರೆಯನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಶ್ರೀಕಾಂತ್, ವಕೀಲ ಕೆ.ಪಿ.ಶ್ರೀಪಾಲ್, ಡಿಎಸ್‌ಎಸ್ ನ ರಾಜ್ಯ ಖಜಾಂಚಿ ಬಿ.ಎ ಕಾಟ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್, ಜಿಲ್ಲಾ ಸಂಚಾಲಕ ಎಂ.ಏಳು ಕೋಟಿ, ನಿವೃತ್ತ ಪ್ರಾಚಾರ್ಯ ಶಿವಬಸಪ್ಪ, ಪ್ರಧ್ಯಾಪಕರಾದ ಬಿ. ಎಲ್.ರಾಜು, ಕುಂಸಿ ಉಮೇಶ್, ಮೇಟಿ ಮಲ್ಲಿಕಾರ್ಜುನ್ ಇದ್ದರು.

ಇದನ್ನೂ ಓದಿ – ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2024

Leave a Comment