ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JANUARY 2024
HOLEHONNURU : ಕೊಪ್ಪ ದೊಡ್ಡಕೆರೆ ಜಾಗವನ್ನು ಕೆರೆಬೀರನಹಳ್ಳಿ ಗ್ರಾಮ ಸಮೀಪ ಅಕ್ರಮವಾಗಿ ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಅಚ್ಚುಕಟ್ಟು ಪ್ರದೇಶದ ರೈತರು ತಡೆದು ಪೊಲೀಸರಿಗೆ ದೂರು ನೀಡಿದ್ದಾರೆ.
ಹಿಟಾಚಿ, ಜೆಸಿಬಿ ಯಂತ್ರಗಳನ್ನು ಬಳಸಿ ಕೆರೆ ಒತ್ತುವರಿ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಅಚ್ಚುಕಟ್ಟು ಭಾಗದ ರೈತರು ಸ್ಥಳಕ್ಕೆ ತೆರಳಿ ಒತ್ತುವರಿ ಕಾರ್ಯವನ್ನು ತಡೆದಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಿಟಾಚಿ, ಜೆಸಿಬಿ, ಟ್ರ್ಯಾಕ್ಟರ್ಗಳನ್ನು ವಶಕ್ಕೆ ಪಡೆದುಕೊಂಡರು.
ಒಟ್ಟು 220.19 ಎಕರೆ ವಿಸ್ತಾರದಲ್ಲಿ ಕೊಪ್ಪ ದೊಡ್ಡಕೆರೆ ಇದೆ. ಈ ಕೆರೆ ನೀರು ಸಾವಿರಾರು ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಕಡಿಮೆ ಮಳೆ, ಭದ್ರಾ ಜಲಾಶಯದ ನಾಲೆಯಿಂದ ನೀರು ಹರಿಸದ ಕಾರಣ ಕೆರೆಯಲ್ಲಿ ನೀರನ ಮಟ್ಟ ಇಳಿಕೆಯಾಗಿದೆ. ಇದೆ ಸಮಯದಲ್ಲಿ ಕೆರೆಯನ್ನು ಒತ್ತುವರಿ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಅಚ್ಚುಕಟ್ಟು ಭಾಗದ ರೈತರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಕೆರೆಯಲ್ಲಿ ರಾಶಿ ರಾಶಿ ಮೀನು ಮರಿಗಳು ಸಾವು
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು
















