SHIVAMOGGA LIVE NEWS | 2 FEBRUARY 2024
SHIMOGA : ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜಾತಿ ಗಣತಿ ವರದಿ ಸಿದ್ದವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ. ಆದರೂ ವರದಿ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಿಲ್ಲ. ಲೋಕಸಭೆ ಚುನಾವಣೆವರೆಗೂ ಜಾತಿಗಣತಿ ವರದಿ ಬಿಡಗಡೆ ಮಾಡುವುದಿಲ್ಲ. ಆದ್ದರಿಂದ ಸುಳ್ಳು ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದರು.
ಬದುಕಿದ್ದೀನಿ ಎಂದು ತೋರಿಸಲು ಹೇಳಿಕೆ
ಪ್ರತ್ಯೇಕ ರಾಷ್ಟ್ರ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದರು. ದೇಶದಲ್ಲಿ ತಾನೊಬ್ಬ ರಾಜಕಾರಣಿ ಬದುಕಿದ್ದೇನೆ ಎಂದು ತೋರಿಸಲು ಹೇಳಿಕೆ ನೀಡಿದ್ದಾರೆ. ಹಿಂದುಸ್ಥಾನ ಮತ್ತು ಪಾಕಿಸ್ತಾನವನ್ನು ಒಡೆದಿದ್ದು ಕಾಂಗ್ರೆಸ್ ಪಕ್ಷದವರೆ. ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ ಒಪ್ಪಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದರು.
ಗುತ್ತಿಗೆದಾರರ ಸಂಘ ಕಣ್ಮುಚಿ ಕೂತಿದೆ
ಕಾಂಗ್ರೆಸ್ ಸರ್ಕಾರದಲ್ಲಿ ಶೇ.40ಕ್ಕಿಂತಲು ಹೆಚ್ಚು ಕಮಿಷನ್ ಇದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಬಿ.ಶಿವಾರಾಂ ಹೇಳಿಕೆಗೆ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ 40 ಪರ್ಸೆಂಟ್ ಕಮಿಷನ್ ಕುರಿತು ಆರೋಪ ಮಾಡಿದ್ದರು. ಈಗ ಕಾಂಗ್ರೆಸ್ನವರೆ ಶೇ.40ಕ್ಕಿಂತಲು ಹೆಚ್ಚು ಕಮಿಷನ್ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಗುತ್ತಿಗೆದಾರರ ಸಂಘದವರು ಈಗ ಕಣ್ಮುಚ್ಚಿ ಕುಳಿತಿದ್ದಾರೆ. ಇದಕ್ಕೆ ಕಾಂಗ್ರೆಸಿಗರು ಏನು ಪ್ರತಿಕ್ರಿಯೆ ಕೊಡುತ್ತಾರೆ ಎಂದು ಸವಾಲು ಹಾಕಿದರು.
ಇದನ್ನೂ ಓದಿ – ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು, ದರೋಡೆ ಬಳಿಕ ಕೊಲೆ ಶಂಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200