SHIVAMOGGA LIVE NEWS | 10 FEBRUARY 2024
SHIMOGA : ‘ಗುಂಡಿಕ್ಕಿ ಕೊಲ್ಲಬೇಕುʼ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ದಾವಣಗೆರೆಯ ಬಡಾವಣೆ ಠಾಣೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.
ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಶನಿವಾರ ಆಗಮಿಸಿದ್ದ ದಾವಣಗೆರೆ ಪೊಲೀಸರು, ನೊಟೀಸ್ ಜಾರಿ ಮಾಡಿದ್ದಾರೆ. ಈಶ್ವರಪ್ಪ ಅವರು ಖುದ್ದು ನೊಟೀಸ್ ಸ್ವೀಕರಿಸಿದ್ದಾರೆ.
ನೊಟೀಸ್ನಲ್ಲಿ ಏನಿದೆ?
ಬಡಾವಣೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಲತಾ ವಿ.ತಾಳೆಕರ್ ಅವರು ನೊಟೀಸ್ ಜಾರಿ ಮಾಡಿದ್ದಾರೆ. ‘ಫೆ.9ರಂದು ತಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕೆಲವು ಸತ್ಯಾಂಶ ಮತ್ತು ಸನ್ನಿವೇಶಗಳನ್ನು ಖಚಿತಪಡಿಸಿಕೊಳ್ಳಬೇಕಿದೆ. ವಿಚಾರಣೆ ಮಾಡಲು ಪೂರಕ ಕಾರಣಗಳು ಕಂಡು ಬಂದಿವೆ. ಆದ್ದರಿಂದ ತಾವು ಫೆ.15ರಂದು ಬೆಳಗ್ಗೆ 10.30ಕ್ಕೆ ಬಡಾವಣೆ ಠಾಣೆಗೆ ಹಾಜರಾಬೇಕುʼ ಎಂದು ನೊಟೀಸ್ನಲ್ಲಿ ತಿಳಿಸಲಾಗಿದೆ.
ನೂರು ನೊಟೀಸ್ ಬಂದರು ಹೆದರಲ್ಲ
ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ‘ಸಂಸದ ಡಿ.ಕೆ.ಸುರೇಶ್ ಅವರಿಗೆ ಗುಂಡಿಕ್ಕಿ ಎಂದು ಹೇಳಿಲ್ಲ. ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೆ. ತಮ್ಮ ಹೇಳಿಕೆ ಕುರಿತು ಗೊಂದಲ ಸೃಷ್ಟಿಸಲಾಗುತ್ತಿದೆ. ಈಗ ನೊಟೀಸ್ ಬಂದಿದೆ. ಅದಕ್ಕೆ ಉತ್ತರ ಕೊಡುತ್ತೇನೆ. ಇಂತಹ ನೂರು ನೊಟೀಸ್ ಬಂದರು ಹೆದರುವುದಿಲ್ಲʼ ಎಂದು ತಿಳಿಸಿದರು.
ಈಶ್ವರಪ್ಪಗೆ ಯಡಿಯೂರಪ್ಪ ಅಭಯ
ಇನ್ನು, ಈಶ್ವರಪ್ಪಗೆ ನೊಟೀಸ್ ನೀಡಿರುವ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ‘ಈಶ್ವರಪ್ಪ ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಅವರು ಹೊಸ ಕಾನೂನು ತರುವಂತೆ ಮನವಿ ಮಾಡಿದ್ದರು. ಆದರೆ ತಪ್ಪು ಕಲ್ಪನೆಯಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಈಶ್ವರಪ್ಪ ಅವರು ಕಾನೂನು ಹೋರಾಟ ಮಾಡಲಿದ್ದಾರೆʼ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ದಿಢೀರ್ ರದ್ದು, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200