SHIVAMOGGA LIVE NEWS | 19 FEBRUARY 2024
ANAVATTI : ಯಾರೂ ಇಲ್ಲದ ವೇಳೆ ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಜಡೆ ಮಾಕೊಪ್ಪ ಗ್ರಾಮದ ಸದಾಶಿವಗೌಡ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
ಸದಾಶಿವಗೌಡ ಮತ್ತು ಅವರ ಪತ್ನಿ ಶಿರಸಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಪಕ್ಕದ ಮನೆಯವರು ಕರೆ ಮಾಡಿ ಮನೆ ಬಾಗಿಲು ತೆಗೆದಿದ್ದು, ಕಳ್ಳತನವಾಗಿರುವ ಶಂಕೆ ಇದೆ ಎಂದು ತಿಳಿಸಿದರು. ಕೂಡಲೆ ಸದಾಶಿವಗೌಡ ಅವರು ಶಿರಸಿಯಿಂದ ಮನೆಗೆ ಮರಳಿದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ.
ಕೊಠಡಿಯಲ್ಲಿ ಇದ್ದ ಕೀ ಬಳಸಿ ಬೀರು ತೆಗೆದು ಬಟ್ಟೆ ಮತ್ತು ಇತರೆ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ಬೀರುವಿನ ಒಳಗೆ ಇಟ್ಟಿದ್ದ 9.35 ಲಕ್ಷ ರೂ. ಮೌಲ್ಯದ ವಿವಿಧ ಆಭರಣಗಳು, 1.30 ಲಕ್ಷ ರೂ. ನಗದು ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200