ಮೈಸೂರು ಪೇಪರ್‌ ಮಿಲ್ಸ್‌ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2024

SESSION NEWS : ನೀಲಗಿರಿ ಬೆಳೆಯಲು ವಿನಾಯಿತಿ ಮತ್ತು ಹೊಣೆಗಾರಿಕೆಗಳಿಲ್ಲದ ಕಂಪನಿ ಕಾರ್ಯಾಚರಣೆಗೆ ಬಿಡ್‌ದಾರರು ಬಯಸಿದ್ದಾರೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್‌ ಮತ್ತು       ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಸದನಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಎಸ್.ರುದ್ರೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.

ಎಂಪಿಎಂ ಕುರಿತು ಸರ್ಕಾರ ಹೇಳಿದ್ದೇನು?

ಕಳೆದ ಅಧಿವೇಶದಲ್ಲಿ ಸರ್ಕಾರ ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು. ಈ ಕುರಿತು ಈವರೆಗು ಯಾವುದೆ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣವೇನು. ಇನ್ನು, ಎಂಪಿಎಂ ಕಾರ್ಖಾನೆ‌ಯನ್ನು ಯಾವಾಗ ಪುನಾರಂಭ ಮಾಡಲಾಗುತ್ತದೆ ಎಂದು ಎಂಎಲ್‌ಸಿ ರುದ್ರೇಗೌಡ ಅವರು ಸರ್ಕಾರವನ್ನು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿರುವ ಸಚಿವ ಎಂ.ಬಿ.ಪಾಟೀಲ್‌, 2020ರ ನವೆಂಬರ್‌ನಲ್ಲಿ ಕರೆದ ಟೆಂಡರ್‌ನಲ್ಲಿ ಯಾವುದೆ ಬಿಡ್‌ ಸ್ವೀಕಾರವಾಗಿಲ್ಲ. ಆದರೆ ನಿರೀಕ್ಷಿತ ಬಿಡ್‌ದಾರರು ನೀಲಗಿರಿ ಬೆಳೆಯಲು ಎಂಪಿಎಂಗೆ ವಿನಾಯಿತಿ ಬೇಕು. ಯಾವುದೆ ಹೊಣೆಗಾರಿಕೆ ಇಲ್ಲದೆ ಕಂಪನಿ ಕಾರ್ಯಾಚರಣೆ ನಡೆಸಲು ಅವಕಾಶ ಬೇಕು ಎಂದು ಕೇಳಿದ್ದಾರೆ. ನೀಲಗಿರಿ ಬೆಳೆಗೆ ವಿನಾಯಿತಿ, 1102 ಕೋಟಿ ರೂ. ಹೊಣೆಗಾರಿಕೆ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ – ಉದ್ಯಮಿ ರುದ್ರೇಗೌಡರ ಯಶಸ್ಸಿನ ಸೀಕ್ರೆಟ್‌ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ, ಏನದು?

2023ರ ನ.17ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಎಂಪಿಎಂಗೆ ನೀಲಗಿರಿ ಬೆಳೆಯಲು ವಿನಾಯಿತಿ ಕುರಿತು ಅರಣ್ಯ ಇಲಾಖೆ ತಜ್ಞರ ಸಮಿತಿಯು ಪರಿಶೀಲಿಸಿ ವರದಿ ನೀಡಬೇಕಿದೆ. ಬಾಕಿ ಇರುವ ವಿದ್ಯುತ್‌ ಶುಲ್ಕ ಮತ್ತು ಅದರ ಬಡ್ಡಿ ಮನ್ನಾಗೆ ಇಂಧನ ಇಲಾಖೆಗೆ ಕೋರಲಾಗಿದೆ. ಕಂಪನಿಯ ಸಾಲ ಮತ್ತು ಬಾಕಿಗಳ ಕುರಿತು ಆರ್ಥಿಕ ಇಲಾಖೆ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ. ನಿರೀಕ್ಷಿತ ಬಿಡ್‌ದಾರರು ಬಯಸಿದಂತೆ ಕ್ರಮ ಕೈಗೊಂಡ ಬಳಿಕ ಕಾರ್ಖಾನೆ ಪುನಾರಂಭ ಮಾಡಲಾಗುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆ.

ಇದನ್ನೂ ಓದಿ – ‘ಸಕ್ಕರೆ ಕಾರ್ಖಾನೆ ಜಾಗ ರೈತರಿಗೆ ಉಳಿಸಿಕೊಡಲು ಇದೊಂದು ತಿದ್ದುಪಡಿ ತರಲಿʼ, ಮಾಜಿ MLA ಸಲಹೆ, ಏನದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment