ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRUARY 2024
SHIMOGA : ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೆ ವೇಳೆ ಮಾತನಾಡಿದ ನಿತಿನ್ ಗಡ್ಕರಿ, ಜಿಲ್ಲೆಯ ಅಭಿವೃದ್ಧಿಗೆ ಕುರಿತು ಕೆಲವು ಪ್ರಮುಖ ಸಂಗತಿ ಪ್ರಸ್ತಾಪಿಸಿದರು.
ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ 6,168.41 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು. 2,138.30 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಗಡ್ಕರಿ ಹೇಳಿದ 4 ಪ್ರಮುಖಾಂಶ
ಅಮೆರಿಕ ಶ್ರೀಮಂತವಾಗಿರಲು ರಸ್ತೆಗಳು ಚೆನ್ನಾಗಿರುವುದೇ ಕಾರಣ ಎಂದು ಅಲ್ಲಿನ ಅಧ್ಯಕ್ಷ ಜಾನ್ ಎಫ್.ಕೆನಡಿ ಹೇಳಿದ್ದರು. ಅದೇ ಮಾತು ದೇಶದ ಸಂಪರ್ಕ ಜಾಲದಲ್ಲಿ ಕ್ರಾಂತಿ ಮಾಡಲು ನನಗೆ ಸ್ಫೂರ್ತಿ. ಹೊಸ ರಸ್ತೆಗಳ ನಿರ್ಮಾಣ, ಹೆದ್ದಾರಿಗಳ ವಿಸ್ತರಣೆಯಿಂದಾಗಿ ಶಿವಮೊಗ್ಗದಲ್ಲಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಕ್ಷೇತ್ರಗಳಲ್ಲಿ ಸಮಗ್ರ ಅಭಿವೃದ್ಧಿ ಆಗಲಿದೆ.
ಸಂಸದ ಬಿ.ವೈ.ರಾಘವೇಂದ್ರ ಜಿಲ್ಲೆಗೆ ಅವಶ್ಯವಿರುವ ಕೆಲಸಗಳ ಕುರಿತು ನಿರಂತರವಾಗಿ ನನ್ನ ಗಮನ ಸೆಳೆಯುತ್ತಿದ್ದಾರೆ. 3 ಕಡೆ ಹೈಮಾಸ್ಟ್ ದೀಪಗಳನ್ನು ಕೇಳಿದ್ದು, ಶಿವಮೊಗ್ಗದ ಬೊಮ್ಮನಕಟ್ಟೆ ಹಾಗೂ ಅರಸಾಳು ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗುವುದು. ಶಿವಮೊಗ್ಗ ಹೊರ ವರ್ತುಲ ರಸ್ತೆ ನಿರ್ಮಾಣವಾಗುತ್ತಿದೆ. ಉತ್ತರ ಭಾಗದಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೊಂದು ಹಂತದ ಕಾಮಗಾರಿ ಮಂಜೂರು ಮಾಡಲಾಗುವುದು.

ತುಮಕೂರು – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ 206ನ್ನು ಚತುಷ್ಪಥವಾಗಿ 6,500 ಕೋಟಿ ರೂ. ವಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. 2025ರ ಜನವರಿಗೆ ಇದು ಪೂರ್ಣವಾಗಲಿದೆ. ಈ ರಸ್ತೆ ಪೂರ್ಣಗೊಳ್ಳುವುದರಿಂದ ಶಿವಮೊಗ್ಗದಲ್ಲಿ ಕೈಗಾರಿಕ ಮತ್ತು ಆರ್ಥಿಕ ಅಭಿವೃದ್ಧಿ ಆಗಲಿದೆ. ಬೆಂಗಳೂರಿಗೆ ಐದು ತಾಸಿನ ಪ್ರಯಾಣ ಎರಡೂವರೆ ತಾಸಿಗೆ ಮುಗಿಯಲಿದೆ.

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡುವ ಬಗ್ಗೆ ಬಿ.ವೈ.ರಾಘವೇಂದ್ರ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದರ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುತ್ತದೆ. ಕೊಡಚಾದ್ರಿ – ಕೊಲ್ಲೂರು ಕೇಬಲ್ ಕಾರ್ ಯೋಜನೆಗೆ ಅನುಮತಿ ನೀಡಲಾಗುತ್ತದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಗುರುರಾಜ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ, ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.
LATEST NEWS
- ಕೇಕ್, ಬಿಸ್ಕತ್ತು, ಕುಕೀಸ್ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

- ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

- ಕಾರಿನಲ್ಲಿ ದಿಢೀರ್ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

- ಜಯನಗರ ಪೊಲೀಸ್ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

- ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 31 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















