ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 FEBRUARY 2024
SHIMOGA : ವಿಚಾರಣಾಧೀನ ಕೈದಿಯೊಬ್ಬ ಗುದದ್ವಾರದಲ್ಲಿ ಗಾಂಜಾ ಬಚ್ಚಿಟ್ಟುಕೊಂಡು ಜೈಲಿನೊಳಗೆ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ಆತನ ವಿರುದ್ಧ ಜೈಲು ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದು, ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಚಿನ್ ಎಂಬಾತನನ್ನು ಹಾಸನದ ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿತ್ತು. ಫೆ.19ರಂದು ಆತ ಜೈಲಿಗೆ ಮರಳಿದ್ದ. ಜೈಲಿನೊಳಗೆ ತೆರಳುವ ಮುನ್ನ ಸಚಿನ್ನನ್ನು ಪರಿಶೀಲಿಸಿದಾಗ ಗುದದ್ವಾರದಲ್ಲಿ ಹಳದಿ ಬಣ್ಣದ ಪೇಪರ್ನಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿತ್ತು. ಅದನ್ನು ವಶಕ್ಕೆ ಪಡೆದ ಕೆಎಸ್ಐಎಸ್ಎಫ್ ಸಿಬ್ಬಂದಿ, ಪರಿಶೀಲಿಸಿದಾಗ ಗಾಂಜಾ ಇರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ – ಶಿವಮೊಗ್ಗ ತಹಶೀಲ್ದಾರ್ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಮೀಟಿಂಗ್, 4 ಪ್ರಮುಖ ವಿಚಾರಗಳ ಮಹತ್ವದ ಚರ್ಚೆ, ಏನೇನು?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















