ಶಿವಮೊಗ್ಗ ಎಪಿಎಂಸಿ ಮೇಲೆ ಲೋಕಾಯುಕ್ತ ದಾಳಿ, ಲಂಚದ ಹಣದೊಂದಿಗೆ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 MARCH 2024

SHIMOGA : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಳಿಗೆ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದು,  ವಿಚಾರಣೆ ನಡೆಸಲಾಗುತ್ತಿದೆ.

ಹೊಸನಗರ ತಾಲೂಕು ನೇರಲಿಗೆ ಗ್ರಾಮದ ರವೀಂದ್ರ ಎಂಬುವವರ ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಳಿಗೆ ಮಂಜೂರು ಮಾಡಲು 2 ಲಕ್ಷ ರೂ. ಹಣಕ್ಕೆ ಬೇಡಿಕೆ ಇಡಲಾಗಿತ್ತು. ಕೊನೆಗೆ ಒಂದು ಲಕ್ಷ ರೂ.ಗೆ ಮಾತುಕತೆಯಾಗಿತ್ತು. ಇವತ್ತು 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಉಮೇಶ ಈಶ್ವರ್‌ ನಾಯ್ಕ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ – ಇನ್‌ಸ್ಟಾಗ್ರಾಂನಲ್ಲಿ ಒಂದು ಕ್ಲಿಕ್‌ ಮಾಡಿದ ಶಿವಮೊಗ್ಗದ ಉದ್ಯಮಿಗೆ ಕಾದಿತ್ತು ಬಿಗ್‌ ಶಾಕ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment