ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 MARCH 2024
ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್
HOLEHONNURU : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಅಗರದಳ್ಳಿ ಕ್ಯಾಂಪ್ನಲ್ಲಿ ಕೂಲಿ ಕೆಲಸಕ್ಕೆ ಹೋಗಿ ಸಿದ್ದರ ಕಾಲೋನಿಯ ಮನೆಗೆ ಮರಳುತ್ತಿದ್ದ ನಾಗರಾಜಪ್ಪ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಅಗರದಳ್ಳಿ ಕ್ಯಾಂಪ್ ಕಡೆಯಿಂದ ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ನಾಗರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಕೂಡಲೆ ನಾಗರಾಜಪ್ಪ ಅವರನ್ನು ಹೊಳೆಹೊನ್ನೂರು ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರನ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್
BHADRAVATHI : ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರರು ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಲಾರಿಯು ಅನ್ವರ್ ಕಾಲೋನಿಯಿಂದ ಜಟ್ಪಟ್ ನಗರಕ್ಕೆ ತೆರಳುತ್ತಿತ್ತು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಕುಳಿತು ಬಂದ ಮೂವರು ಲಾರಿ ಚಕ್ರಕ್ಕೆ ಡಿಕ್ಕಿ ಹೊಡೆಸಿಕೊಂಡು ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಅಪಘಾತದ ಹಿನ್ನೆಲೆ ಲಾರಿ ಚಾಲಕ ಗುಂಡಣ್ಣ ಮತ್ತು ಲಾರಿಯಲ್ಲಿದ್ದ ರಾಜು ಅವರ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಬೈಕ್ ಸವಾರರ ಜೊತೆಗೆ ಇನ್ನೂ ಕೆಲವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಹಲ್ಲೆಕೋರರು ಪರಾರಿಯಾಗಿದ್ದಾರೆ. ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್, ಎಫ್ಐಆರ್ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






