ಶಿವಮೊಗ್ಗ KSRTC ನಿಲ್ದಾಣದಲ್ಲಿ ವ್ಯಕ್ತಿ ಸಾವು | ರೈಲಿಗೆ ಸಿಲುಕಿ ವ್ಯಕ್ತಿ ಮೃತ | ಡಿಕ್ಕಿ ಹೊಡೆಸಿ ಕಾರು ಬಿಟ್ಟು ಚಾಲಕ ಪರಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 MARCH 2024

ಎದುರಿನಿಂದ ಬಂದ ಬೈಕ್‌ಗೆ ಕಾರು ಡಿಕ್ಕಿ, ಚಾಲಕ ಎಸ್ಕೇಪ್

FATAFAT-NEWS-1SHIMOGA : ಓವರ್‌ ಟೇಕ್‌ ವೇಳೆ ಎದುರಿನಿಂದ ಬಂದ ಬೈಕ್‌ಗೆ ಕಾರು ಡಿಕ್ಕಿಯಾಗಿದೆ. ಬೈಕ್‌ ಸವಾರ ಕೃಷಿ ನಗರದ ಸುರೇಶ್‌ ಕುಮಾರ್‌ ಎಂಬುವವರಿಗೆ ಗಾಯವಾಗಿದೆ. ಶಿವಮೊಗ್ಗ ತಾಲೂಕು ಅರಳಿಹಳ್ಳಿ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಸವಳಂಗ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಅರಳಿಹಳ್ಳಿ ಬಳಿ ಬೈಕ್‌ ಒಂದನ್ನು ಓವರ್‌ಟೇಕ್‌ ಮಾಡಲು ಹೋಗಿ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಮತ್ತು ಬೈಕ್‌ನು ಮುಂಭಾಗ ಜಖಂ ಆಗಿದೆ. ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು

FATAFAT-NEWS-2SORABA : ತಾಲೂಕಿನ ಮಾವಲಿ ಗ್ರಾಮದಲ್ಲಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಯನ್ನು ಭಾನುವಾರ ಕಳವು ಮಾಡಲಾಗಿದೆ. ಗ್ರಾಮದ ಶಿಕ್ಷಕ ಈಶ್ವರಪ್ಪ ಅವರ ಮನೆಯಲ್ಲಿದ್ದ 10 ಚೀಲ ಸಿಪ್ಪೆಗೋಟು ಅಡಿಕೆ, ಹಾಗೆಯೇ ಚೆನ್ನಬಸಪ್ಪಗೌಡ ಅವರ ಮನೆಯಲ್ಲಿ ಸಂಗ್ರಹಿಸಿಟ್ಟ 8 ಚೀಲ ಸಿಪ್ಪೆಗೋಟು ಅಡಿಕೆ ಕಳವಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಓಮ್ನಿಯಲ್ಲಿ 350 ಲೀಟರ್‌ ಡಿಸೇಲ್‌ ಪತ್ತೆ, ವಶಕ್ಕೆ

FATAFAT-NEWS-3AGUMBE : ಹೆಬ್ರಿ ಕಡೆಯಿಂದ ಓಮ್ಮಿಯಲ್ಲಿ ಸಾಗಿಸುತ್ತಿದ್ದ 30 ಸಾವಿರ ರೂ. ಮೊತ್ತದ 350 ಲೀಟರ್ ಡೀಸೆಲ್ ತುಂಬಿದ್ದ 12 ಆಯಿಲ್ ಕ್ಯಾನ್, ಓಮ್ಮಿಯನ್ನು ಆಗುಂಬೆ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಭಾನುವಾರ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ವಾಹನ ತಡೆದು ತಪಾಸಣೆ ನಡೆಸಿದಾಗ ಡೀಸೆಲ್ ಪತ್ತೆಯಾಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲಿಗೆ ಸಿಲುಕಿ ಅಪರಿಚಿತ ಸಾವು

Fatafat 3TARIKERE : ತರೀಕೆರೆ ತಾಲೂಕು ಶಿವಪುರ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. 40ರಿಂದ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದು ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಮಲಗಿದ್ದಲ್ಲೆ ವ್ಯಕ್ತಿ ಸಾವು

Fatafat5SHIMOGA : ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಗೃಹದ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೇ ಮೃತಪಟ್ಟಿದ್ದಾನೆ. 50ರಿಂದ 55 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಶವವನ್ನು ಮೆಗ್ಗಾನ್‌ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ – ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 26, 2024

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

Leave a Comment