ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2024
SORABA : ತಾಲ್ಲೂಕಿನ ಶಾಂತಪುರ ಸಂಸ್ಥಾನ ಮಠದಲ್ಲಿ ಭಾನುವಾರ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಜನಜಾಗೃತಿ ಧರ್ಮ ಸಮಾರಂಭ ಹಾಗೂ 22ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ರಂಭಾಪುರಿ ಮಠದ ವೀರ ಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಶ್ರೀಗಳು ಪ್ರಮುಖ ವಿಚಾರಗಳನ್ನು ತಿಳಿಸಿದರು.
ಆಂತರಿಕ ಬದುಕು ಪರಿಶುದ್ಧವಾಗಬೇಕು
ಮನುಷ್ಯನ ಬದುಕು ಸಮೃದ್ಧಗೊಂಡಂತೆ ಮಾನಸಿಕ ನೆಮ್ಮದಿಗಾಗಿ ಆಂತರಿಕ ಬದುಕು ಪರಿಶುದ್ಧಗೊಳ್ಳಬೇಕು. ಆಧುನಿಕ ಕಾಲದಲ್ಲಿ ಮಾನವೀಯ ಸಂಬಂಧಗಳು ಶಿಥಿಲಗೊಳ್ಳುತ್ತಿವೆ. ಮನುಷ್ಯನಿಗೆ ಮಾನಸಿಕ ಶಾಂತಿ, ಸಂತೃಪ್ತಿ ಇಲ್ಲದಂತಾಗಿದೆ. ನೆಮ್ಮದಿ ನೆಲೆಗೊಳ್ಳಬೇಕಾದರೆ ಆಂತರಿಕ ಬದುಕು ಪರಿಶುದ್ಧವಾಗಬೇಕು.
ಬದುಕಿಗೆ ಸಂಸ್ಕಾರ ಮುಖ್ಯ. ಸಂಪ್ರದಾಯಗಳು ಬದಲಾಗಬಹುದು ಅದರೆ, ನೈತಿಕತೆ ಶಾಶ್ವತವಾಗಿರುತ್ತದೆ. ಅಂಗ ಅವಗುಣ ದೂರವಾಗಿ ಲಿಂಗ ಗುಣ ಬೆಳೆಸಲು ವೀರಶೈವ ಧರ್ಮ ಸದಾ ಶ್ರಮಿಸಿದೆ. ಭಕ್ತರ ಸಹಕಾರದಿಂದ ಪ್ರತಿವರ್ಷ ಜಯಂತ್ಯುತ್ಸವ ಆಚರಿಸುತ್ತಿರುವುದು ಸಂತೋಷ ತಂದಿದೆ.
ಪರಂಪರೆ, ನಂಬಿಕೆ, ಪ್ರೀತಿ ವಿಶ್ವಾಸವು ನಮ್ಮ ದೇಶದ ಶ್ರಿಮಂತಿಕೆಯ ಪ್ರತೀಕವಾಗಿವೆ. ಭಕ್ತರು ತಾವು ಬೆಳೆದ ಬೆಳೆಗಳನ್ನು, ಸಂಪತ್ತನ್ನು ಸತ್ಕಾರ್ಯಗಳಿಗೆ ದಾನ ಮಾಡುವುದರಿಂದ ಪುಣ್ಯದ ಫಲ ಲಭಿಸುವುದುಮಹಾಂತ ಸ್ವಾಮೀಜಿ, ಜಡೆ ಸಂಸ್ಥಾನ ಮಠ
ಮನುಷ್ಯ ತನ್ನ ನೆಲೆಯನ್ನು ಕಂಡುಕೊಳ್ಳಲು ಧರ್ಮದ ಆಚರಣೆಗಳು ಬೇಕು. ಇಲ್ಲದಿದ್ದರೆ ನಮ್ಮ ಭಾವನೆಗಳು ಅಧೋಗತಿಗೆ ತಲುಪುತ್ತವೆ. ಧರ್ಮದ ದಾರಿಯಲ್ಲಿ ನಡೆಯಲು ಸಂಸ್ಕಾರ ಬೇಕು. ಮೋಕ್ಷದ ದಾರಿಗೆ ಗುರುವಿನ ಕೃಪೆ ಬೇಕು.ಸುಜ್ಞಾನ ಶಿವಾಚಾರ್ಯ ಸ್ವಾಮೀಜಿ, ಶಿರಹಟ್ಟಿ
ನಿವೃತ್ತ ಪ್ರಾಂಶುಪಾಲ ಪಂಚಾಕ್ಷರಯ್ಯ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಿರೀಶ್ ಕುಬಟೂರು ಕಾರ್ಯಕ್ರಮ ಉದ್ಘಾಟಿಸಿದರು. ಶಾಂತಪುರ ಸಂಸ್ಥಾನ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ದಾನಯ್ಯ ದೇವರು, ಋಷಭಸೇನ ಭಟ್ಟಾರಕ ಸ್ವಾಮೀಜಿ, ಸದಾನಂದಗೌಡ ಬಿಳಿಗಲಿ, ಬಂಗಾರಪ್ಪಗೌಡ, ವಿಜೇಂದ್ರ ಕುಮಾರ್ ತಲಗುಂದ, ಗುರುಪ್ರಸನ್ನ ಗೌಡ ಇದ್ದರು.
ಇದನ್ನೂ ಓದಿ – ‘ಹಸೆ ಚಿತ್ತಾರ’ ಪುಸ್ತಕ ಬಿಡುಗಡೆ, ಯಾರೆಲ್ಲ ಭಾಗವಹಿಸಿದ್ದರು, ಏನೇನೆಲ್ಲ ಮಾತನಾಡಿದರು?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















