ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2024
ELECTION NEWS : ಪ್ರಚಾರ ಕಾರ್ಯ ಬಿರುಸುಗೊಳಿಸಿರುವ ಬಿಜೆಪಿ, ಸೈನ್ಸ್ ಮೈದಾನದಲ್ಲಿ ನಗರದ ಘಟಕದಿಂದ ಪೇಜ್ ಪ್ರಮುಖರ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು.

ರಾಘವೇಂದ್ರ ಏನೆಲ್ಲ ಹೇಳಿದರು?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ವಿಶ್ವಮಟ್ಟದಲ್ಲಿ ಬೆಳೆದು ನಿಂತಿದೆ. ಸ್ವಾತಂತ್ರ್ಯಾ ನಂತರ ನಾವೆಲ್ಲರೂ ಗೌರವದಿಂದ ಸಮಾಜದಲ್ಲಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಮೋದಿ ಆಡಳಿತವೇ ಕಾರಣ. 60 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶವನ್ನು ದುಸ್ಥಿತಿಗೆ ತಳ್ಳಿತ್ತು. ಆದರೆ ಕಳೆದ 10 ವರ್ಷದಲ್ಲಿ ನಮ್ಮ ಸರ್ಕಾರ ಆರೋಗ್ಯ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಮಾಡಿದೆ.
ಕಳೆದ ಒಂದೂವರೆ ವರ್ಷದಲ್ಲಿ ಪ್ರಧಾನಿ ಅವರು ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಸೇರಿ ಮೂರು ಬಾರಿ ಶಿವಮೊಗ್ಗಕ್ಕೆ ಬಂದಿದ್ದಾರೆ. ಅಂತಹ ಒಬ್ಬ ಮಹಾನ್ ನಾಯಕನನ್ನು ಇಲ್ಲಿಗೆ ಕರೆಸಿಕೊಂಡಿದ್ದೇವೆ ಎಂದರೆ ಅದು ಇಲ್ಲಿನ ಕಾರ್ಯಕರ್ತರು ಮತ್ತು ಮಣ್ಣಿಗಿರುವ ಶಕ್ತಿ. ದೇಶದ ಸುರಕ್ಷತೆಗಾಗಿ ಮೋದಿ ಅವರು ಅನಿವಾರ್ಯ.

ಶಿವಮೊಗ್ಗದಲ್ಲಿ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರಿಗೆ ನಮ್ಮವರೇ ಬೆದರಿಕೆ ಹಾಕುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ನಮ್ಮವರೇ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ತಾಯಿ ಹಾಲು ಕುಡಿದು ಬಂದಿರುವ ಬಿಜೆಪಿ ಕಾರ್ಯಕರ್ತರು ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಮನಸ್ಸುಗಳು ಒಂದಾಗಿ ಈ ಬಾರಿ ಚುನಾವಣೆಯ ತೇರನ್ನು ಒಟ್ಟಾಗಿ ಎಳೆಯುತ್ತಿದ್ದೇವೆ. ಮುಂದಿನ 30 ರಿಂದ 35 ದಿನ ಶ್ರಮ ಹಾಕಿ ಕೆಲಸ ಮಾಡಿದರೆ ಗೆಲುವಿಗೆ ಸಹಕಾರಿ ಆಗಲಿದೆ.
[su_highlight background=”#710900″ color=”#ffffff”]ಇದನ್ನೂ ಓದಿ[/su_highlight] – ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















