SHIVAMOGGA LIVE NEWS | 2 APRIL 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
POLITICAL NEWS : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್ಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್.ಪ್ರಸನ್ನ ಕುಮಾರ್ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಜಿಲ್ಲಾಧ್ಯಕ್ಷರಾಗಿದ್ದರು
ಈವರೆಗೂ ಹೆಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಈಚೆಗೆ ಸುಂದರೇಶ್ ಅವರನ್ನು ಸೂಡ ಅಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. ಈ ಹಿನ್ನೆಲೆ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗಿದೆ. ಆರ್.ಪ್ರನಸ್ನ ಕುಮಾರ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈ ಹಿಂದೆ ಶಿವಮೊಗ್ಗ ಕಾಂಗ್ರೆಸ್ನ ಅಧ್ಯಕ್ಷರಾಗಿ ಅನುಭವ ಹೊಂದಿದ್ದಾರೆ.
ಇದನ್ನೂ ಓದಿ – ‘ಬಿಜೆಪಿಯ ರಾಘವೇಂದ್ರ ನಾಳೆ ಬಾ ಗಿರಾಕಿ’, ಶಿವಮೊಗ್ಗದಲ್ಲಿ ಕಾಂಗ್ರೆಸ್ ವಕ್ತಾರ ವ್ಯಂಗ್ಯ, ಕಾರಣವೇನು?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






