ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 APRIL 2024
SHIMOGA : ನಗರದ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹಕ್ಕೆ ವಾದ್ಯ ನುಡಿಸಲು ತೆರೆಳುತ್ತಿದ್ದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿ ತಾಲೂಕು ಕುರುವ ಗ್ರಾಮದ ರಮೇಶ್ (19), ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಅಜಯ್ (23) ಮೃತರು.
ಘಟನೆ ಸಂಭವಿಸಿದ್ದು ಹೇಗೆ?
ಶಿವಮೊಗ್ಗದ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ವಾದ್ಯ ನುಡಿಸಲು ರಮೇಶ್, ಅಜಯ್ ಸೇರಿದಂತೆ ಐವರು ಮೂರು ಬೈಕ್ಗಳಲ್ಲಿ ತೆರಳುತ್ತಿದ್ದರು. ಬುಳ್ಳಾಪುರದಲ್ಲಿ ಹಿಂಬದಿಯಿಂದ ಬಂದ ಬೈಕ್ ರಮೇಶ್ ಮತ್ತು ಅಜಯ್ ತೆರಳುತ್ತಿದ್ದ ಬೈಕ್ ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದಿದೆ.
ಎರಡು ಬೈಕ್ನಲ್ಲಿದ್ದವರು ಕೆಳಗೆ ಬಿದ್ದಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದಾಗ ಅಜಯ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ರಮೇಶ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಂಸತ್ತಿನಲ್ಲಿ ಶಿವಮೊಗ್ಗ ಸಂಸದರು ಕೇಳಿದ ಮೊದಲ ಪ್ರಶ್ನೆ ಏನು? ಸಚಿವರ ಉತ್ತರವೇನಿತ್ತು? ಇಲ್ಲಿದೆ ಡಿಟೇಲ್ಸ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















