SHIVAMOGGA LIVE NEWS | 3 APRIL 2024
ELECTION SPECIAL : ಶಿವಮೊಗ್ಗದ ಸಂಸದರೊಬ್ಬರು ಪಾರ್ಲಿಮೆಂಟ್ನ ಎರಡು ಮನೆಯಲ್ಲು ಎರಡನೇ ಅತಿ ಪ್ರಮುಖ ಹುದ್ದೆ ಅಲಂಕರಿಸಿದ್ದರು. ಇವರು ಕಲಾಪಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಸೇರಿದಂತೆ ಎಲ್ಲ ಸದಸ್ಯರು ಮೇಲೆದ್ದು ಗೌರವ ಸಲ್ಲಿಸುತ್ತಿದ್ದರು.
ಎರಡು ಮನೆಯ ಉಪ ಸಭಾಧ್ಯಕ್ಷ
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಭಾಧ್ಯಕ್ಷರು (ಸ್ಪೀಕರ್) ಮೊದಲ ಪ್ರಮುಖ ಹುದ್ದೆ. ಉಪ ಸಭಾಧ್ಯಕ್ಷ (ಡೆಪ್ಯೂಟಿ ಸ್ಪೀಕರ್) ಎರಡನೇ ಅತಿ ಪ್ರಮುಖ ಹುದ್ದೆಯಾಗಿದೆ. ಸಭಾಧ್ಯಕ್ಷರ ಅನಪಸ್ಥಿತಿಯಲ್ಲಿ ಕಲಾಪ ನಡೆಸುವ ಸಂಪೂರ್ಣ ಜವಾಬ್ದಾರಿ ಉಪ ಸಭಾಧ್ಯಕ್ಷರದ್ದು. ಎರಡು ಮನೆಯ ಸದಸ್ಯರು ಸಭಾಧ್ಯಕ್ಷರ ಪೀಠದಲ್ಲಿರುವ ಸಭಾಧ್ಯಕ್ಷ ಅಥವಾ ಉಪ ಸಭಾಧ್ಯಕ್ಷರನ್ನು ಉದ್ದೇಶಿಸಿಯೇ ಮಾತನಾಡಬೇಕು. ಇಂತಹ ಮಹತ್ವದ ಜವಾಬ್ದಾರಿಯನ್ನು ಶಿವಮೊಗ್ಗದ ಸಂಸದರೊಬ್ಬರು ನಿಭಾಯಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಸಂಸದ ಯಾರು ಗೊತ್ತಾ? ಬ್ರಿಟೀಷರಿಗೆ ಅವರನ್ನು ಕಂಡರೆ ಮುಖ ಕೆಂಪಾಗುತ್ತಿದ್ದದ್ದು ಯಾಕೆ?
ಶಿವಮೊಗ್ಗದ ಸಂಸದರಾಗಿದ್ದ ಎಸ್.ವಿ.ಕೃಷ್ಣಮೂರ್ತಿ ರಾವ್ ಅವರು ರಾಜ್ಯಸಭೆ ಮತ್ತು ಲೋಕಸಭೆಯ ಉಪ ಸಭಾಧ್ಯಕ್ಷರಾಗಿದ್ದರು. ಮೊದಲು ರಾಜ್ಯಸಭೆ ಸದಸ್ಯರಾಗಿದ್ದ ಕೃಷ್ಣಮೂರ್ತಿ ರಾವ್ ಅವರು 1952ರ ಮೇ 31ರಿಂದ 1956ರ ಏಪ್ರಿಲ್ 2ರವರೆಗೆ ಮತ್ತು 1956ರ ಏಪ್ರಿಲ್ 25 ರಿಂದ 1962ರ ಮಾರ್ಚ್ 1ರವರೆಗೆ ರಾಜ್ಯಸಭೆಯ ಉಪ ಸಭಾಧ್ಯಕ್ಷರಾಗಿದ್ದರು. 1962ರಲ್ಲಿ ಎಸ್.ವಿ.ಕೃಷ್ಣಮೂರ್ತಿ ರಾವ್ ಅವರು ಶಿವಮೊಗ್ಗದ ಸಂಸದರಾಗಿ ಆಯ್ಕೆಯಾದರು. ಆ ಬಳಿಕ ಲೋಕಸಭೆಯ ಉಪ ಸಭಾಧ್ಯಕ್ಷರಾಗಿ 1967ರ ಮಾರ್ಚ್ 3ರವರೆಗೆ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ – ಸಂಸತ್ತಿನಲ್ಲಿ ಶಿವಮೊಗ್ಗ ಸಂಸದರು ಕೇಳಿದ ಮೊದಲ ಪ್ರಶ್ನೆ ಏನು? ಸಚಿವರ ಉತ್ತರವೇನಿತ್ತು? ಇಲ್ಲಿದೆ ಡಿಟೇಲ್ಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200