ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 APRIL 2024
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂಜಿನಿಯರ್ ಒಬ್ಬರಿಗೆ ಸೇರಿದ ಲ್ಯಾಪ್ಟಾಪ್ ಕಳ್ಳತನವಾಗಿದೆ. ಬೆಂಗಳೂರಿನಿಂದ ಯಲ್ಲಾಪುರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಶಿವಮೊಗ್ಗ ನಿಲ್ದಾಣಕ್ಕೆ ಬಂದು ನಿಂತಾಗ ಘಟನೆ ಸಂಭವಿಸಿದೆ.
ಲಕ್ಷ್ಮಿ ಮಹಾಬಲೇಶ್ವರ ಎಂಬುವವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಡೆವಲಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನಿಂದ ಉತ್ತರ ಕನ್ನಡಕ್ಕೆ ಬಸ್ಸಿನಲ್ಲಿ ತೆರಳುತ್ತಿದ್ದರು. ತಮ್ಮ ಸೀಟಿನ ಪಕ್ಕದಲ್ಲಿ ಲ್ಯಾಪ್ಟಾಪ್ ಬ್ಯಾಗ್ ಇರಿಸಿಕೊಂಡಿದ್ದರು. ಬಸ್ಸು ಬೆಳಗಿನ ಜಾವ 4.30ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿತ್ತು. ಈ ವೇಳೆ ಲಕ್ಷ್ಮಿ ಮಹಾಬಲೇಶ್ವರ ಅವರು ನಿದ್ರೆಗೆ ಜಾರಿದ್ದರು. 15 ನಿಮಿಷದ ಬಳಿ ಬಸ್ ಹೊರಟಿದ್ದು ನಿಲ್ದಾಣದಿಂದ ಹೊರ ಬಂದಾಗ ಎಚ್ಚರವಾಗಿದೆ. ಪಕ್ಕದ ಸೀಟಿನಲ್ಲಿದ್ದ ಬ್ಯಾಗ್ ಇರಲಿಲ್ಲ ಎಂದು ಆರೋಪಿಸಿದಾರೆ.
ಬ್ಯಾಗ್ನಲ್ಲಿ ಒಂದು ಲ್ಯಾಪ್ಟಾಪ್, ಕಂಪನಿಯ ಐಡಿ ಕಾರ್ಡ್, ಐ ಫೋನ್ ಮೊಬೈಲ್ ಇತ್ತು ದೂರು ನೀಡಿದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ, ಕಾರಣವೇನು? ಯಾವಾಗ ಜಾರಿಯಾಗುತ್ತೆ?
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















