SHIVAMOGGA LIVE NEWS | 15 APRIL 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ಶ್ರೀ ರಾಮಚಂದ್ರಾಪುರ ಮಠದಲ್ಲಿ ಇಂದಿನಿಂದ ರಾಮೋತ್ಸವ ಆರಂಭವಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ. ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ರಾಮೋತ್ಸವದ ವಿಶೇಷ ಧಾರ್ಮಿಕ ಮತ್ತು ಸಾಂಸ್ಕ್ರೃತಿಕ ಕಾರ್ಯಕ್ರಮಗಳು ನಡೆಯಲಿವೆ.
ರಾಮಾಯಣ ಪಾರಾಯಣದೊಂದಿಗೆ ಚಾಲನೆ
ಈಗಾಗಲೇ ಏ.9 ರಂದು ವಾಲ್ಮೀಕಿ ರಾಮಾಯಣ ಪಾರಾಯಣದೊಂದಿಗೆ ರಾಮೋತ್ಸವಕ್ಕೆ ಚಾಲನೆ ನೀಡಲಾಗಿದೆ. ಏ. 19 ರವರೆಗೆ ನಡೆಯಲಿದೆ. ಏ. 15ರಂದು ರಾಘವೇಶ್ವರಭಾರತೀ ಶ್ರೀ ಪುರಪ್ರವೇಶ ಜರುಗಲಿದೆ. ಸಂಜೆ ದೀಪ ಮಾಲಿಕೆ ಕಾರ್ಯಕ್ರಮ ನಡೆಯಲಿದೆ. ಏ.16ರಂದು ಅಖಂಡ ಭಜನೆ, ಪೂಗ ಪೂಜೆ ಮತ್ತು ಪುಷ್ಪ ರಥೋತ್ಸವ, ರಾತ್ರಿ 8 ಗಂಟೆಗೆ ಮಾರುತಿ ಪ್ರತಾಪ ಯಕ್ಷಗಾನ ಆಯೋಜಿಸಲಾಗಿದೆ.
ಏ. 17ರಂದು ರಾಮಜನ್ಮೋತ್ಸವ, ಸೀತಾಕಲ್ಯಾಣೋತ್ಸವ, ರಾಮಲೀಲಾ ಕಾರ್ಯಕ್ರಮ ಮತ್ತು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಏ.18 ರಂದು ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ, ಭಜನಾಮಂಗಲ, ಆಶೀರ್ವಚನ, ಮಂತ್ರಾಕ್ಷತೆ ನಡೆಯಲಿದೆ. ಅಂದು ರಾವಣ ದಹನ ಮಾಡಲಾಗುತ್ತದೆ. ಈ ಬಾರಿ 20 ಕೈಗಳ ರಾವಣನ ದಹನಕ್ಕೆ ವ್ಯವಸ್ಥೆಯಾಗಿದೆ. ಏ.19ರಂದು ಅಂಕುರ ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ರಾಮೋತ್ಸವ ಸೇವಾ ಸಮಿತಿ ಅಧ್ಯಕ್ಷ ಸೀತಾರಾಮ ಶಿವಮೊಗ್ಗ ತಿಳಿಸಿದ್ದಾರೆ.
ಇದನ್ನೂ ಓದಿ – ಶಕ್ತಿ ದೇವತೆ ಸಮ್ಮುಖದಲ್ಲಿ ಬಿ.ಫಾರಂಗೆ ಪೂಜೆ, ಇವತ್ತು ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






