ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
BHADRAVATHI : ತುಂಗಾ-ಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಭದ್ರಾವತಿ ತಹಶೀಲ್ದಾರ್ ಕೆ.ಆರ್.ನಾಗರಾಜು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ನಿಷೇಧ? ಕಾರಣವೇನು?
ತಾಲೂಕಿನ ಡಣಾಯಕಪುರ, ಸಿದ್ಲೀಪುರ, ಸನ್ಯಾಸಿಕೊಡಮಗ್ಗಿ, ಮಂಗೋಟೆ, ಆನವೇರಿ, ವಡೇರಪುರ (ನಿಂಬೆಗೊಂದಿ) ಗ್ರಾಮಗಳಲ್ಲಿ ತುಂಗಾ – ಭದ್ರಾ ನದಿ ಪಾತ್ರಕ್ಕೆ ಅಕ್ರಮ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಹಿಂದೆ ಇಲ್ಲಿನ ನಿಕ್ಷೇಪಗಳಲ್ಲಿ ಗಣಿಗಾರಿಕೆ ನಡೆಸಲು ಹರಾಜು ಮೂಲಕ 5 ವರ್ಷ ಅವಧಿಗೆ ವಿಲೇವಾರಿ ಮಾಡಲಾಗಿತ್ತು. ಅವಧಿ ಮುಗಿದರು ಅಕ್ರಮವಾಗಿ ಮರಳು ಗಣಿಗಾರಿಕೆ ಮುಂದುವರಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವರದಿ ಸಲ್ಲಿಸಿದ್ದರು. ಅಲ್ಲದೆ ಇಲ್ಲಿನ ನಿಕ್ಷೇಪಗಳನ್ನು ಹರಾಜು ಮೂಲಕ ವಿಲೇಪಡಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆ ತಹಶೀಲ್ದಾರ್ ಅವರು ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ನೆಹರೂ ರಸ್ತೆಯಲ್ಲಿ ಆಟೋ ಚಾಲಕನ ತಲೆಗೆ ದೊಣ್ಣೆಯಿಂದ ಹೊಡೆದ ಮತ್ತೊಬ್ಬ ಆಟೋ ಚಾಲಕ
LATEST NEWS
- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು
















