ಶಿವಮೊಗ್ಗ ಲೋಕಸಭೆ ಚುನಾವಣೆ‌, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಮತದಾರರನ್ನು ತಲುಪಲು ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ತಮ್ಮ ಪ್ರಚಾರ ಸಭೆಗಳ ಮಾಹಿತಿಯನ್ನು ಮಾಧ್ಯಮಗಳು, ಜನರಿಗೆ ತಲುಪಿಸಲು ಸ್ವಂತ ವರದಿಗಾರರ ಪಡೆ, ಕ್ಯಾಮರಾ ಟೀಮ್‌ ನಿಯೋಜನೆ ಮಾಡಿಕೊಂಡಿದ್ದಾರೆ.

ವರದಿಗಾರರ ನೇಮಕ

Reporter team for Politiciansಪತ್ರಿಕೆ, ಮಾಧ್ಯಮಗಳಿಗೆ ವರದಿಗಾರರು ಇರುವುದು ಸಾಮಾನ್ಯ. ಆದರೆ ಶಿವಮೊಗ್ಗದಲ್ಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮದ ವರದಿಯನ್ನು ಜನರಿಗೆ ತಲುಪಿಸಲು ವರದಿಗಾರರನ್ನು ನೇಮಿಸಿಕೊಂಡಿದ್ದಾರೆ. ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿಗಳು, ಹಿರಿಯ ಪತ್ರಕರ್ತರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಏನೆಲ್ಲ ಕೆಲಸ ಮಾಡುತ್ತಾರೆ?

ಈ ವರದಿಗಾರರು ಅಭ್ಯರ್ಥಿಗಳ ಜೊತೆಗೆ ಸಭೆ, ಸಮಾರಂಭಕ್ಕೆ ತೆರಳುತ್ತಾರೆ. ಅಭ್ಯರ್ಥಿಗಳ ಭಾಷಣ, ಕಾರ್ಯಕ್ರಮಗಳ ಪ್ರಮುಖಾಂಶಗಳನ್ನು ವರದಿ ಮಾಡುತ್ತಾರೆ. ಅವುಗಳನ್ನು ಶಿವಮೊಗ್ಗ ಜಿಲ್ಲೆಯ ಮಾಧ್ಯಮಗಳು, ಅಭ್ಯರ್ಥಿಗಳ ಸಾಮಾಜಿಕ ಜಾಲತಾಣ, ಕಾರ್ಯಕರ್ತರಿಗೆ ವಾಟ್ಸಪ್‌ ಗ್ರೂಪ್‌ಗಳಿಗೆ ರವಾನಿಸುತ್ತಾರೆ. ಇದರಿಂದ ಅಭ್ಯರ್ಥಿಗಳ ಪ್ರಚಾರದ ಪ್ರತಿ ಅಪ್‌ಡೇಟ್‌ ಎಲ್ಲರಿಗು ತಲುಪಲಿದೆ ಎಂಬುದು ಅಭ್ಯರ್ಥಿಗಳ ಲೆಕ್ಕಾಚಾರ.

ಹೈಟೆಕ್‌ ಕ್ಯಾಮರಾ ಟೀಮ್‌

Camera Team for Politicansಸಭೆ, ಸಮಾರಂಭಗಳು, ಅಭ್ಯರ್ಥಿಗಳ ಕ್ಯಾಂಡಿಡ್‌ ಫೋಟೊ, ವಿಡಿಯೋಗಳನ್ನು ಸೆರೆ ಹಿಡಿಯಲು ಫೋಟೊ, ವಿಡಿಯೋಗ್ರಾಫರ್‌ಗಳನ್ನು ನೇಮಿಸಿಕೊಂಡಿದ್ದಾರೆ. ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಿಗೆ ಫೋಟೊ, ವಿಡಿಯೋಗಳನ್ನು ರವಾನಿಸುತ್ತಾರೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಮತ್ತು ಅವರನ್ನು ತಲುಪಲು ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಶೇಷಾದ್ರಿಪುರಂದನಲ್ಲಿ ಮಟಮಟ ಮಧ್ಯಾಹ್ನ ಮನೆಯಿಂದ ಹೊರ ಬಂದ ಚಾಲಕನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 26, 2024

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

Leave a Comment