ಶಿವಮೊಗ್ಗದಲ್ಲಿ ಇನ್ನು ಐದು ದಿನ ಆರೆಂಜ್‌ ಅಲರ್ಟ್‌, ಹಲವು ಜಿಲ್ಲೆಗಳಿಗು ವಾರ್ನಿಂಗ್‌, ಏನಿದು ಎಚ್ಚರಿಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2024

WEATHER REPORT : ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇನ್ನು ಐದು ದಿನ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ತೀವ್ರ ಬಿಸಿಲಿನ ಹಿನ್ನೆಲೆ ಈ ಅಲರ್ಟ್‌ ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರಕಟಿಸಿದೆ.

ಏಪ್ರಿಲ್‌ 29 ರಿಂದ ಮೇ 3ರವರೆಗೆ ಬಿಸಿ ಗಾಳಿ ಇರಲಿದೆ. ಆದ್ದರಿಂದ ಐದು ದಿನ ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ

ಯಾವ್ಯಾವ ಜಿಲ್ಲೆಗೆ ಅಲರ್ಟ್?‌

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್‌, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ.

ಇದನ್ನೂ ಓದಿ – ಇನ್ನು ಎಂಟೆ ದಿನ ಬಾಕಿ, ಯಾವ್ಯಾವ ಅಭ್ಯರ್ಥಿಗಳು ಯಾವೆಲ್ಲ ಅಜೆಂಡ ಇಟ್ಟುಕೊಂಡು ಪ್ರಚಾರ ನಡೆಸ್ತಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment