ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 APRIL 2024
SHIMOGA : ಗಾಂಧಿ ಬಜಾರ್ನ ಕಾಳಿಕ ಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಆಭರಣ, ಹಣ ಕಳ್ಳತನ ಮಾಡಲಾಗಿದೆ. ದೇವಿಯ ಮೂರ್ತಿಯನ್ನು ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನದ ಅಧ್ಯಕ್ಷ ರಮೇಶ್ ದೂರು ನೀಡಿದ್ದಾರೆ.
ಏ.28ರಂದು ಬೆಳಗ್ಗೆ ದೇವಸ್ಥಾನದ ಮ್ಯಾನೇಜರ್ ಬಂದಾಗ ದೇಗುಲದ ಬಾಗಿಲಿನ ಬೀಗ ಮರಿದಿರುವುದು ಗೊತ್ತಾಗಿದೆ. ಗರ್ಭಗುಡಿಗೆ ಹಾಕಿದ್ದ ಬೀಗಗಳನ್ನು ಮುರಿಯಲಾಗಿತ್ತು. ಒಟ್ಟು 1.97 ಲಕ್ಷ ರೂ. ಮೌಲ್ಯ ಚಿನ್ನ, ಬೆಳ್ಳಿಯ ಆಭರಣ, 52 ಸಾವಿರ ರೂ. ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಇನ್ನು, ದೇವಿಯ ಮೂರ್ತಿಯ ಮುಖದ ಭಾಗದಲ್ಲಿ ಗೀಚಿ ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಂಕಿ, ಸುಟ್ಟು ಕರಕಲಾಯ್ತು ಅಂಗಡಿ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















