ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 APRIL 2024
ELECTION NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಸೂಚಿಸಿದೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಮಂಡಳಿಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸುದ್ದಿಗೋಷ್ಠಿ ನಡೆಸಿ, ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಯಾರೆಲ್ಲ ಏನೇನು ಹೇಳಿದರು?
- ಎನ್.ಎಂ.ಸುರೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ
ಶಿಕಾರಿಪುರ ತಾಲೂಕಿನಿಂದ ಬರಿಗೈಲಿ ಬೆಂಗಳೂರಿಗೆ ಹೋಗಿದ್ದ ನಾನು ಈಗ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿದ್ದೇನೆ. ಇದಕ್ಕೆ ಡಾ. ರಾಜ್ಕುಮಾರ್ ಅವರ ಕುಟುಂಬ ಕಾರಣ. ಚಿತ್ರರಂಗಕ್ಕೆ ಅವರ ಕುಟುಂಬದ ಸೇವೆ ಅನನ್ಯ. ಇದೇ ಕಾರಣಕ್ಕೆ ಎಲ್ಲರು ಸ್ವಯಂ ಪ್ರೇರಿತವಾಗಿ ಗೀತಾ ಶಿವರಾಜ್ ಕುಮಾರ್ ಅವರ ಬೆಂಬಲಕ್ಕೆ ಬಂದಿದ್ದೇವೆ. ಬಂಗಾರಪ್ಪ ಪುತ್ರಿ ಗೀತಾ ಅವರ ರಕ್ತದಲ್ಲಿಯೇ ರಾಜಕಾರಣವಿದೆ. ಅವರಿಗೆ ಜಯ ಸಿಗಲಿದೆ.
- ಸಾ.ರಾ.ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ
ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ಕಾವೇರಿ ನೀರು ಹರಿಸದೆ ಸುಗ್ರಿವಾಜ್ಞೆ ಹೊರಡಿಸಿ ಎದೆಗಾರಿಕೆ ತೋರಿಸಿದ್ದರು. ಅವರ ಮಕ್ಕಳ ರಾಜಕಾರಣವು ಇದೇ ದಿಸೆಯಲ್ಲಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಅಂಗ ಸಂಸ್ಥೆಗಳು ಗೀತಾ ಶಿವರಾಜ್ ಕುಮಾರ್ ಅವರಿಗೆ ಬೆಂಬಲ ಘೋಷಿಸಿವೆ. ಹಲವು ಕಲಾವಿದರು ಈಗಾಗಲೇ ಬಂದು ಪ್ರಚಾರ ನಡೆಸುತ್ತಿದ್ದಾರೆ.
.jpeg)
ಸಚಿವ ಮಧು ಬಂಗಾರಪ್ಪ, ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್, ಚಂದ್ರಭೂಪಾಲ್ ಸೇರಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪ್ರಮುಖರು ಇದ್ದರು.
ಇದನ್ನೂ ಓದಿ – ಈಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್ ಸ್ಮರಿಸಿದ ಈಶ್ವರಪ್ಪ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















