ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2024
ELECTION NEWS : ‘ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದಿಲ್ಲವೆ?ʼ ಅಂತಾ ಶಾಸಕ ರಾಜು ಕಾಗೆ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದ್ದಾರೆ. ಇದು ಕೇವಲ ಶಾಸಕ ರಾಜು ಕಾಗೆ ಅವರ ಅಭಿಪ್ರಾಯವಲ್ಲ. ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಸದ ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ಇದು ಶಾಸಕ ರಾಜು ಕಾಗೆ ಅವರ ಮಾತು ಅನ್ನುವುದಕ್ಕಿಂತಲೂ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಅವರ ಮೂಲಕ ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ಸಾವು ಬಯಸುತ್ತಿದೆ. ಪ್ರಧಾನಿ ಮೋದಿ ಅವರಿಗೆ ಆರೋಗ್ಯ, ಹೆಚ್ಚಿನ ಆಯಸ್ಸು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ ಎಂದರು.
ಇನ್ನು, ಈ ಬಾರಿ ಲೀಡ್ ಕಡಿಮೆಯಾದರೆ ಕರೆಂಟ್ ಕಡಿತಗೊಳಿಸುವುದಾಗಿ ಶಾಸಕ ರಾಜು ಕಾಗೆ ಹೇಳಿದ್ದಾರೆ. ಇಂತಹ ದಬ್ಬಾಳಿಕೆಯ ಮಾತನ್ನಾಡಲು ಇದು ತುರ್ತು ಪರಿಸ್ಥಿತಿಯ ಕಾಲವಲ್ಲ. ಇದರ ವಿರುದ್ಧ ಚುನಾವಣ ಆಯೋಗಕ್ಕೆ ದೂರು ನೀಡಲಾಗುತ್ತದೆ. ಈ ಹೇಳಿಕೆಗಳ ಹಿನ್ನೆಲೆ ಶಾಸಕ ರಾಜು ಕಾಗೆ ಮತ್ತು ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದವರಿಗೆ ಅಭಿವೃದ್ಧಿ ವಿಚಾರದಲ್ಲಿ ಮಾತನಾಡಲು ಯಾವುದೆ ವಿಷಯಗಳಿಲ್ಲ. ಗ್ಯಾರಂಟಿ ವಿಚಾರವನ್ನು ಮಾತ್ರ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲ್ಲಿದೆ ಎಂದು ಆಂತರಿಕ ಮಾಹಿತಿ ಗೊತ್ತಾಗಿದೆ. ಆದ್ದರಿಂದ ಈಗ ಹಗುರ ಮಾತುಗಳನ್ನು ಆಡುತ್ತಿದ್ದಾರೆ ಎಂದು ಟೀಕಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ರಾಹುಲ್ ಗಾಂಧಿ, ಬೆಂಗಾವಲು ಪಡೆಯಿಂದ ಇವತ್ತು ಡಮ್ಮಿ ಕಾನ್ವಾಯ್, ಹೇಗಿದೆ ಭದ್ರತೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






