ಶಿವಮೊಗ್ಗದಲ್ಲಿ ನಾಳೆಯಿಂದ ಪಾಲಿಸಲೆಬೇಕು ಈ 6 ಮಾರ್ಗಸೂಚಿ, ಏನೇನದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 MAY 2024

LOKSABHA NEWS : ಮೇ 7ರಂದು ಲೋಕಸಭೆ ಚುನಾವಣೆ ಮತದಾನ ನಡೆಯಲಿದೆ. 48 ಗಂಟೆ ಮೊದಲು ವಿವಿಧ ನಿರ್ಬಂಧ ವಿಧಿಸಲಾಗುತ್ತಿದೆ. ಈ ಸಂಬಂಧ ಚುನಾವಣ ಆಯೋಗ ಆರು ಪ್ರಮುಖ ಮಾರ್ಗಸೂಚಿ ಹೊರಡಿಸಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾರ್ಗಸೂಚಿ ಪ್ರಕಟಿಸಿದರು.

ಆರು ಮಾರ್ಗಸೂಚಿ

ಮಾರ್ಗಸೂಚಿ 1 : ಕ್ಷೇತ್ರ ವ್ಯಾಪ್ತಿಯ ಮತದಾರರು ಹೊರತು ಉಳಿದೆಲ್ಲ ಸ್ಟಾರ್‌ ಪ್ರಚಾರಕರು, ರಾಜಕೀಯ ವ್ಯಕ್ತಿಗಳು ಲೋಕಸಭೆ ಕ್ಷೇತ್ರದಿಂದ ಹೊರಗೆ ತೆರಳಬೇಕು. ‘ಹೊರಗಿನವರು ಇಲ್ಲಿ ಅಭ್ಯರ್ಥಿಯಾಗಿದ್ದರೆ ಅವರು ಇಲ್ಲಿ ಉಳಿಬಹುದು. ಅದರ ಹೊರತು ಹೊರಗಿನವರು ಕ್ಷೇತ್ರ ತೊರೆಯಬೇಕು’ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಮಾರ್ಗಸೂಚಿ 2 : ಬಹಿರಂಗ ರಾಜಕೀಯ ಪ್ರಚಾರ ಸಭೆ, ಸಮಾವೇಶ, ರಾಲಿಗಳನ್ನು ನಿರ್ಬಂಧಿಸಲಾಗಿದೆ. ಬಲ್ಕ್‌ ಎಸ್‌ಎಂಎಸ್‌ ಬಳಕೆ ಮಾಡುವಂತಿಲ್ಲ. ‘ರಾಜಕೀಯ ಪಕ್ಷದವರು ಐದು ಜನಕ್ಕಿಂತಲು ಹೆಚ್ಚಿರಬಾರದು. ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ಅವಕಾಶವಿದೆ’ ಎಂದು ಗುರುದತ್ತ ಹೆಗಡೆ ಹೇಳಿದರು.

ಮಾರ್ಗಸೂಚಿ 3 : ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳು ಅನ್ಯ ಪಕ್ಷ ಅಥವಾ ಅಭ್ಯರ್ಥಿಯ ಬಗ್ಗೆ ಅವಹೇಳನ ಮಾಡುವಂತ್ತಿಲ್ಲ. ಜಾತಿ, ಧರ್ಮದ ಉದ್ವಿಗ್ನತೆ ಸೃಷ್ಟಿಸುವಂತ್ತಿಲ್ಲ.

ಮಾರ್ಗಸೂಚಿ 4 : ಮನೆ ಮನೆ ಪ್ರಚಾರದ ವೇಳೆ ಧ್ವನಿವರ್ಧಕಗಳ ಬಳಕೆ ಮಾಡುವಂತಿಲ್ಲ.

ಮಾರ್ಗಸೂಚಿ 5 : ಮೇ 5ರ ಸಂಜೆ 5 ಗಂಟೆಯಿಂದ ಮತ್ತು ಮೇ 7ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮಾರ್ಗಸೂಚಿ 6 : ಚೆಕ್‌ಪೋಸ್ಟ್‌ ಮತ್ತು ವಿವಿಧೆಡೆ ತಪಾಸಣೆಗಳನ್ನು ತೀವ್ರಗೊಳಿಸಲಾಗುತ್ತದೆ.

ಇದನ್ನೂ ಓದಿ – ಮದ್ಯ ಪ್ರಿಯರ ಗಮನಕ್ಕೆ, ನಾಳೆ ಸಂಜೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 4, 2024

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

Leave a Comment