ಗೆಲುವಿನ ಅಂತರದ ಕುರಿತು ಸಂಸದ ರಾಘವೇಂದ್ರ ಹೇಳಿಕೆ, ಎಷ್ಟು ಅಂತರದ ಗೆಲುವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 MAY 2024

SHIMOGA : ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಿದೆ. ತಾವು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮತ್ತು ಪ್ರಚಾರದ ಕುರಿತು 3 ಪ್ರಮುಖ ಸಂಗತಿಗಳನ್ನು ಪ್ರಸ್ತಾಪಿಸಿದರು.

ರಾಘವೇಂದ್ರ ಹೇಳಿದ 3 ಪ್ರಮುಖಾಂಶ

POINT-1ಲೋಕಸಭೆ ಚುನಾವಣೆಯನ್ನು ನಾವು ಸಂಘಟನಾತ್ಮಕವಾಗಿ ಎದುರಿಸಿದ್ದೆವು. ಇದೇ ಮೊದಲ ಬಾರಿಗೆ ಅತ್ಯಧಿಕ ಮತದಾನ ವಾಗಿದೆ. ದೊಡ್ಡ ಅಂತರದಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಒಗ್ಗೂಡಿ ಚುನಾವಣೆಯಲ್ಲಿ ಕೆಲಸ ಮಾಡಿದರು. ಮೈತ್ರಿ ಪಕ್ಷದಲ್ಲಿ ಯಾವುದೇ ಅಪಸ್ವರವಿರಲಿಲ್ಲ. ಜೆಡಿಎಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕೆಲಸ ಮಾಡಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಸ್ವಂತ ಕೆಲಸವನ್ನೂ ಮರೆತು ಕಾರ್ಯನಿರ್ವಹಿಸಿದ್ದಾರೆ.

POINT-2ಚುನಾವಣಾ ಪ್ರಚಾರ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸಭೆ ನಡೆಸುವ ಮೂಲಕ ಒಟ್ಟು 75 ಬಹಿರಂಗ ಸಭೆಗಳು ನಡೆದವು. ಪಕ್ಷದ ವಿವಿಧ ಮೋರ್ಚಾಗಳಿಂದ ಒಟ್ಟು 1,560 ಸಭೆಗಳನ್ನು ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದಲ್ಲಿ 220 ಸಭೆ ನಡೆಸಲಾಗಿತ್ತು. ಖುದ್ದು ನಾನು 396 ಸಭೆಗಳಲ್ಲಿ ಭಾಗವಹಿಸಿದ್ದೆ. ರಾಜ್ಯಮಟ್ಟದ ನಾಯಕರು 21 ಸಭೆಗಳಲ್ಲಿ ಭಾಗವಹಿಸಿದ್ದರು.

POINT-3ನಮ್ಮ ಮತದಾರರು ಹೃದಯ ವೈಶಾಲ್ಯ ಉಳ್ಳವರು. ಅವರು ಬಿಜೆಪಿ ಹಾಗೂ ನನ್ನ ಬಗ್ಗೆ ಎಷ್ಟು ಪ್ರೀತಿ ಹೊಂದಿದ್ದಾರೋ ಅಷ್ಟು ಪ್ರಮಾಣದಲ್ಲಿ ನನ್ನ ಗೆಲುವಿನ ಅಂತರ ಹೆಚ್ಚಲಿದೆ. ಪ್ರಧಾನಿ ಮೋದಿ ನಮ್ಮ ನಾಯಕ. ಅವರ ಹೆಸರಿನಲ್ಲಿ, ನಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಮೇಲೆ ಮತ ಯಾಚಿಸಿದ್ದೆ.

ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಸಚಿವ ಕುಮಾ‌ರ್ ಬಂಗಾರಪ್ಪ, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್, ಪ್ರಮುಖರಾದ ಎಸ್‌.ದತ್ತಾತ್ರಿ, ಹರಿಕೃಷ್ಣ ಸೇರಿ ಇತರರಿದ್ದರು.

ಇದನ್ನೂ ಓದಿ – ಕೋರ್ಟ್‌ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment