ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 MAY 2024
KUMSI : ಒಂದೇ ಜಮೀನಿನಲ್ಲಿ ಎರಡು ಬಾರಿ ಶುಂಠಿ ಕಳ್ಳತನವಾಗಿದೆ. ಬೆಳೆಗಾರ ಇಲ್ಲದ ಸಂದರ್ಭ ಗಮನಿಸಿ 9 ಕ್ವಿಂಟಾಲ್ ಶುಂಠಿ ಕಳವು ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ಹಿಟ್ಟಗೊಂಡನಕೊಪ್ಪ ಗ್ರಾಮದಲ್ಲಿ ಜಮೀನು ಗುತ್ತಿಗೆ ಪಡೆದು ಕುಂಸಿಯ ದೇವೇಂದ್ರ ಎಂಬುವವರು ಶುಂಠಿ ಬೆಳೆದಿದ್ದರು. ನಿತ್ಯ ಜಮೀನಿಗೆ ಹೋಗಿ ಬರುತ್ತಿದ್ದರು.
ಏಪ್ರಿಲ್ 29ರ ರಾತ್ರಿ ಜಮೀನಿನಲ್ಲಿ ಬೆಳೆದಿದ್ದ ಸುಮಾರು 7 ಕ್ವಿಂಟಾಲ್ ಶುಂಠಿ ಕಳವು ಮಾಡಲಾಗಿತ್ತು. ಈ ಹಿನ್ನೆಲೆ ರಾತ್ರಿ ವೇಳೆ ಜಮೀನಿನಲ್ಲಿ ದೇವೇಂದ್ರ ಕಾವಲು ಕಾಯಲು ಆರಂಭಿಸಿದರು. ಮೇ 4ರಂದು ಮದುವೆ ಸಮಾರಂಭಕ್ಕೆ ದೇವೇಂದ್ರ ತೆರಳಿದ್ದರು. ಆ ರಾತ್ರಿ ನಾಲ್ಕು ಚೀಲ ಶುಂಠಿ ಕಳುವಾಗಿತ್ತು. ಬೆಳೆಗಾರ ಇಲ್ಲದ ಸಂದರ್ಭವನ್ನೆ ಗಮನಿಸಿ 92 ಸಾವಿರ ರೂ. ಮೌಲ್ಯದ ಶುಂಠಿ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಆಗುಂಬೆ ಬಳಿ ಅಪಘಾತ, ಒಬ್ಬ ಸಾವು, ಕ್ಯಾಂಟರ್ ಜಖಂ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






