SHIVAMOGGA LIVE NEWS | 15 MAY 2024
SHIMOGA : ಗೂಡ್ಸ್ ವಾಹನದ ಡ್ಯಾಶ್ ಬೋರ್ಡ್ನಲ್ಲಿ ಇಟ್ಟಿದ್ದ 1.50 ಲಕ್ಷ ರೂ. ಹಣವನ್ನು (Money) ವ್ಯಕ್ತಿಯೊಬ್ಬ ಕಳ್ಳತನ ಮಾಡಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸವಾರ್ಲೈನ್ ರಸ್ತೆಯಲ್ಲಿರುವ ವಿಆರ್ಎಲ್ ಕಚೇರಿ ಆವರಣದಲ್ಲಿ ಘಟನೆ ಸಂಭವಿಸಿದೆ.
ಪರಿಚಿತ ಅಂತಾ ಮಾತಾಡಿಸಿದ್ದೆ ತಪ್ಪಾಯ್ತಾ?
ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ವಿಆರ್ಎಲ್ ಸಂಸ್ಥೆಯಲ್ಲಿ ಪಾರ್ಸಲ್ ಕೊಂಡೊಯ್ಯಲು ಬಂದಿದ್ದರು. ಈ ಸಂದರ್ಭ ನರಸಿಂಹಮೂರ್ತಿ ಎಂಬಾತ ಸಿಕ್ಕಿದ್ದು, ಆತನೊಂದಿಗೆ ಮಾತನಾಡಿದ್ದಾರೆ. ತಿಮ್ಮಪ್ಪ ವಿಆರ್ಎಲ್ ಕಚೇರಿ ಒಳ ಹೋದಾಗ ನರಸಿಂಹಮೂರ್ತಿ ವಾಹನದ ಡ್ಯಾಶ್ ಬೋರ್ಡ್ನಲ್ಲಿದ್ದ 1.50 ಲಕ್ಷ ರೂ. ಹಣ ಕಳ್ಳತನ ಮಾಡಿದ್ದ.
ಹಣ ಕಳವು ಗೊತ್ತಾಗಿದ್ದು ಹೇಗೆ?
ಕೋಣಂದೂರಿನ ಫ್ಯಾನ್ಸಿ ಅಂಗಡಿಯೊಂದರ ಮಾಲೀಕ ಗಾಂಧಿ ಬಜಾರ್ನಲ್ಲಿ ಒಂದಷ್ಟು ವಸ್ತುಗಳನ್ನು ತರಲು ತಿಮ್ಮಪ್ಪ ಅವರಿಗೆ ಆ ಹಣ ನೀಡಿದ್ದರು. ತಿಮ್ಮಪ್ಪ ಅವರು ವಿಆರ್ಎಲ್ನಲ್ಲಿ ಪಾರ್ಸಲ್ ತೆಗೆದುಕೊಂಡು ಗಾಂಧಿ ಬಜಾರ್ಗೆ ತೆರಳಿ ಹೋಲ್ ಸೇಲ್ ವ್ಯಾಪಾರಿಗೆ ಹಣ ನೀಡಲು ಡ್ಯಾಶ್ ಬೋರ್ಡ್ ತೆಗೆದಾಗ ಹಣ ನಾಪತ್ತೆಯಾಗಿತ್ತು. ವಿಆರ್ಎಲ್ ಕಚೇರಿಗೆ ಹಿಂತಿರುಗಿ ಮ್ಯಾನೇಜರ್ಗೆ ತಿಳಿಸಿ ಸಿಸಿಟಿವಿ ಪರಿಶೀಲಿಸಿದಾಗ ನರಸಿಂಹಮೂರ್ತಿ ಕಳ್ಳತನ ಮಾಡಿರುವುದು ಗೊತ್ತಾಗಿದೆ.
ನರಸಿಂಹಮೂರ್ತಿಗೆ ಕರೆ ಮಾಡಿದ ವಿಆರ್ಎಲ್ ಮ್ಯಾನೇಜರ್ ಹಣ ಹಿಂತಿರುಗಿಸುವಂತೆ ಸೂಚಿಸಿದ್ದಾರೆ. ಆದರೆ ಆತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ‘ಅಮೃತಧಾರೆ’ ಆರಂಭ, ಏನಿದು? ಉದ್ದೇಶವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200