SHIVAMOGGA LIVE NEWS | 17 MAY 2024
SHIMOGA : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಲ್ಲಿ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಿಸಲಾಗಿದೆ. ಆಕಾಂಕ್ಷಿಗಳ (Aspirant) ಅಭಿಪ್ರಾಯ ಕೇಳದೆ ಅಭ್ಯರ್ಥಿ ಘೋಷಿಸಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೌಜನ್ಯಕ್ಕು ಆಹ್ವಾನಿಸಿಲ್ಲ ಎಂದು ಬಿಜೆಪಿ ಕಾನೂನು ಪ್ರಕೋಷ್ಟದ ಸಹ ಸಂಚಾಲಕ ಪ್ರವೀಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್, ಪದವೀಧರ ಕ್ಷೇತ್ರಕ್ಕೆ ಗಿರೀಶ್ ಪಟೇಲ್, ಎಸ್.ದತ್ತಾತ್ರಿ, ರಘಪತಿ ಭಟ್ ಮತ್ತು ನಾನು ಆಕಾಂಕ್ಷಿಗಳಾಗಿದ್ದೆವು. ಇದಕ್ಕಾಗಿ ಪದವೀಧರರ ನೋಂದಣಿ ಕಾರ್ಯ ನಡೆಸಿದ್ದೇವೆ. ಆದರೆ ತಮ್ಮ ಅಭಿಪ್ರಾಯ ಕೇಳದೆ, ಈಚೆಗಷ್ಟೆ ಬಿಜೆಪಿ ಸೇರಿದವರಿಗೆ ಟಿಕೆಟ್ ನೀಡಲಾಗಿದೆ. ಇನ್ನೊಂದೆಡೆ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕಡು ಭ್ರಷ್ಟ ಎಂದು ಆರೋಪಿಸಿದರು.
ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ
ಮೇ 21ರ ನಂತರ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ದೇವೇಂದ್ರಪ್ಪ, ಮಹೇಂದ್ರ ಕುಮಾರ್, ವಾಗೀಶ್ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200