ಭದ್ರಾವತಿಯ VISL ಮಾರಾಟಕ್ಕಿದೆ, ಖರೀದಿಗೆ 25 ದಿನವಷ್ಟೇ ಅವಕಾಶ, ಕಾರ್ಖಾನೆಯನ್ನು ಯಾರು ಕೊಳ್ಳಬಹುದು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 05 ಜುಲೈ 2019

ತೀವ್ರ ವಿರೋಧದ ನಡುವೆಯೂ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರ (SAIL) ಜಾಗತಿಕ ಟೆಂಡರ್ ಕರೆದಿದೆ. ಇದರ ಜಾಹೀರಾತನ್ನು ರಾಷ್ಟ್ರೀಯ ಪತ್ರಿಕೆಗಳು ಮತ್ತು SAIL ವೆಬ್’ಸೈಟ್’ನಲ್ಲಿ ಪ್ರಕಟಿಸಲಾಗಿದೆ.

25 ದಿನದ ಅವಕಾಶ

VISL ಜೊತೆಗೆ ಇನ್ನೆರಡು ಕಾರ್ಖಾನೆಗಳನ್ನು ಮಾರಟ ಮಾಡುತ್ತಿರುವುದಾಗಿ SAIL ಪ್ರಕಟಿಸಿದೆ. ಸೇಲಂ ಮತ್ತು ದುರ್ಗಾಪುರದಲ್ಲಿರುವ ಕಾರ್ಖಾನೆಗಳನ್ನು ಟೆಂಡರ್’ನಲ್ಲಿ ಪ್ರಕಟಿಸಲಾಗಿದೆ. ಕಾರ್ಖಾನೆಗಳ ಖರೀದಿಗೆ SAIL ಕೇವಲ 25 ದಿನದ ಅವಕಾಶ ನೀಡಿದೆ. ಆಗಸ್ಟ್ 1 ಕಡೆಯ ದಿನಾಂಕವಾಗಿದೆ.

ಯಾರು ಖರೀದಿ ಮಾಡಬಹುದು?

VISL ಕಾರ್ಖಾನೆ ಖರೀದಿಯ ಬಿಡ್’ನಲ್ಲಿ ಭಾಗವಹಿಸುವ ಕಂಪೆನಿಗಳಿಗೆ ಕೆಲವು ಷರತ್ತುಗಳಿವೆ. 100 ಕೋಟಿ ರೂ. ಆಸ್ತಿ ಹೊಂದಿರುವ, ಕಳೆದ ಮೂರು ವರ್ಷದಲ್ಲಿ 1600 ಕೋಟಿ ರೂ. ವಹಿವಾಟು ನಡೆಸಿರುವ ಯಾವುದೇ ಕಂಪೆನಿ ಬಿಡ್’ನಲ್ಲಿ ಪಾಲ್ಗೊಳ್ಳಬಹುದು ಎಂದು SAIL ತಿಳಿಸಿದೆ.

ಸಂಸತ್ತಿನಲ್ಲಿ ಧ್ವನಿ ಎತ್ತಿದ ಎರಡೇ ದಿನಕ್ಕೆ..!

VISL ಪುನಶ್ಚೇತನಗೊಳಿಸಬೇಕು ಎಂದು ಸಂಸದ ರಾಘವೇಂದ್ರ, ಎರಡು ದಿನದ ಹಿಂದಷ್ಟೇ ಸಂಸತ್ತಿನಲ್ಲಿ ಮಾತನಾಡಿದ್ದರು. ಇನ್ನು, ಇದಕ್ಕೂ ಮೊದಲು ಬಿಜೆಪಿ ಮುಖಂಡರು, ಯಾವುದೇ ಕಾರಣಕ್ಕೂ VISL ಕಾರ್ಖಾನೆ ಖಾಸಗಿಗೆ ವಹಿಸಲು ಬಿಡುವುದಿಲ್ಲ ಎಂದೂ ಭರವಸೆ ನೀಡಿದ್ದರು. ಅದರೆ ಈಗ ಕೇಂದ್ರ ಸರ್ಕಾರ ಕಾರ್ಖಾನೆ ಮಾರಾಟಕ್ಕೆ ಮುಂದಾಗಿರುವುದು ಕಾರ್ಮಿಕರ ಆಕ್ರೋಶಕ್ಕೆ ತುತ್ತಾಗಿದೆ. ಈಗಾಗಲೇ ಹೋರಾಟಕ್ಕೆ VISL ಕಾರ್ಮಿಕರು ಸಿದ್ಧಗೊಳ್ಳುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2019

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment