SHIVAMOGGA LIVE NEWS | 20 MAY 2024
SAGARA : ಶಾಲೆ, ಕಾಲೇಜಿನಿಂದ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷಧವಿದೆ. ಹೀಗಿದ್ದೂ ಗುಟ್ಕಾ, ಸಿಗರೇಟ್ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ ನೀಡಿ ಪರಿಶೀಲಿಸಿ, ಎಚ್ಚರಿಕೆ ನೀಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಅಂಗಡಿಯೊಂದರಲ್ಲಿ ಗುಟ್ಕಾ, ಪಾನ್, ಸಿಗರೇಟ್ ಮಾರಾಟ ಮಾಡಲಾಗುತ್ತಿತ್ತು. ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕಾಲೇಜು ಸಮೀಪ ಇವೆಲ್ಲ ಮಾರಾಟ ಮಾಡುವಂತ್ತಿಲ್ಲ. ಮಕ್ಕಳ ಶೈಕ್ಷಿಣಿಕ ಬದುಕಿನ ಮೇಲೆ ಪರಿಣಾಮ ಉಂಟು ಮಾಡಲಿದೆ. ಇದು ಹೀಗೆ ಮುಂದುವರೆದರೆ ಅಂಗಡಿ ಬಂದ್ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
