ಆಪರೇಷನ್‌ ಕರಡಿ ಯಶಸ್ವಿ, ಕಾರ್ಯಾಚರಣೆ ವೇಳೆ ಸಿಬ್ಬಂದಿ ಜಸ್ಟ್‌ ಮಿಸ್‌, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIKARIPURA : ಈಸೂರು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು (BEAR) ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ ಕರಡಿಯನ್ನು ಕಾಡಿಗಟ್ಟಲಾಗಿದೆ.

ಈಸೂರು ಗ್ರಾಮದಲ್ಲಿ ಗುರುವಾರ ಕರಡಿ ಪ್ರತ್ಯಕ್ಷವಾಗಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೆ ಮೊಕ್ಕಾಂ ಹೂಡಿ ಕರಡಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಶುಕ್ರವಾರ ಸಂಜೆ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇಗುಲದ ಹಿಂಭಾಗ ಕೆರೆಯಲ್ಲಿ ಕರಡಿ ಕಾಣಿಸಿಕೊಂಡಿತ್ತು. ಕೆರೆ ಸುತ್ತಲು ಬಲೆ ಹಾಕಿ, ಕರಡಿ ಕಾಡಿಗಟ್ಟುವ ಪ್ರಯತ್ನ ನಡೆಸಲಾಯಿತು.

ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್‌, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್‌

ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ಕರಡಿ ದಾಳಿಗೆ ಮುಂದಾಯಿತು. ಜನರ ಕೂಗಾಟ, ಅರಣ್ಯ ಇಲಾಖೆ ಸಿಬ್ಬಂದಿ ಕೈಯಲ್ಲಿಯದ್ದ ಲಾಠಿ ಕಂಡು ಪುನಃ ಕೆರೆ ದಂಡೆ ಮೇಲಿನ ಪೊದೆಯಲ್ಲಿ ಅವಿತು ಕೂತಿತ್ತು. ಸಂಜೆ ಕಾರ್ಯಾಚರಣೆ ನಡೆಸಿ ಸಮೀಪದ ಗೊಬ್ಬರದ ಹೊಂಡ ಅರಣ್ಯ ಪ್ರದೇಶಕ್ಕೆ ಕರಡಿಯನ್ನು ಅಟ್ಟಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment