SHIVAMOGGA LIVE NEWS | 26 MAY 2024
ANANDAPURA : ಲಾಂಗ್ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ (Youth) ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾಗರ ತಾಲೂಕು ಆನಂದಪುರದಲ್ಲಿ ಘಟನೆ ಸಂಭವಿಸಿದೆ. ಸದ್ಯ ಇದರ ವಿಡಿಯೋ ವೈರಲ್ ಆಗಿದೆ.
ಯುವಕನೊಬ್ಬ ಲಾಂಗ್ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಲಾಂಗ್ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್ ಅಗಿದೆʼ ಎಂದು ಆತ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆತನ ಕೈಯಲ್ಲಿದ್ದ ಲಾಂಗ್ ಕಸಿದ ಸ್ಥಳೀಯರು ರಸ್ತೆಯ ಪಕ್ಕದ ಕೆರೆಗೆ ಎಸೆದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿದ್ದಾರೆ.
ಆ ಯುವಕನನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಆನಂದಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ಲಾಂಗ್ ಬೀಸುತ್ತ ಓಡಾಡಿದ್ದರಿಂದ ಆನಂದಪುರದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು.
ಇದನ್ನೂ ಓದಿ – ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200