ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MAY 2024
SHIMOGA : ಬಿ.ಬೀರನಹಳ್ಳಿಯ ವೆಂಕಟಾಪುರ ಗ್ರಾಮದ ಶ್ರೀ ತಿರುಮಲ ದೇವರ ದೇವಸ್ಥಾನ (Temple) ಸಮಿತಿಯಿಂದ ಶ್ರೀ ತಿರುಮಲ ರಂಗನಾಥ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಮೇ 28, 29ರಂದು ತಿರುಕಲ್ಯಾಣೋತ್ಸವ ಸೇರಿದಂತೆ ಹೋಮ, ಹವನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ದೇವಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 28ರಂದು ಸಂಜೆ 5ಕ್ಕೆ ಗುರು ಪ್ರಾರ್ಥನೆ, ಅನುಜ್ಞೆ ಮಹಾಸಂಕಲ್ಪ ಮಹಾಗಣಪತಿ ಆರಾಧನೆ, ಸಂಜೆ 7ಕ್ಕೆ ಶ್ರೀ ತಿರುಮಲ ರಂಗನಾಥ ಸ್ವಾಮಿ ಕಲ್ಯಾಣೋತ್ಸವ ಜರುಗಲಿದೆ. 29ರ ಬೆಳಗ್ಗೆ 6ಕ್ಕೆ ಸುಪ್ರಭಾತ ಸೇವೆ, ಕಲಶಾರಾಧನೆ, ಅಭಿಷೇಕ, ವಿವಿಧ ಹೋಮಗಳನ್ನು ನಡೆಸುವ ಜತೆಗೆ ವಿಶೇಷವಾಗಿ ರಂಗನಾಥ ಸ್ವಾಮಿ ಮೂಲಮಂತ್ರ ಹೋಮ, ಮಹಾ ಸುದರ್ಶನ ಹೋಮ, ನರಸಿಂಹ ಮೂಲ ಮಂತ್ರ ಹೋಮ, ಮಹಾ ಪೂರ್ಣಾಹುತಿ ನಡೆಯಲಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಸ್ತೆಗಿಳಿದ ಚೆನ್ನಮ್ಮ ಪಡೆ, ಕಾರ್ಯಾಚರಣೆ ಆರಂಭ
ಎಲ್ಲ ಧಾರ್ಮಿಕ ಕಾರ್ಯಗಳು ಬೆಂಗಳೂರಿನ ಕೆಂಗೇರಿಯ ರಾಮಾನುಜ ಮಠದ ಶ್ರೀ ಚಿರಂಜೀವಿ ರಾಮಚಂದ್ರ ಭಟ್ಟಾಚಾರ್ಯ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ದಿನೇಶ್ ಪಟೇಲ್, ಅಜಯ್, ಬಸವರಾಜ್, ಮತ್ತಿತರರಿದ್ದರು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






