ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MAY 2024
HOLEHONNURU : ತುಂಗಭದ್ರ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವ ಆರೋಪದ ಹಿನ್ನೆಲೆ ಭದ್ರಾವತಿ ತಾಲೂಕು ಸಿದ್ಲಿಪುರದಲ್ಲಿ ಅಧಿಕಾರಿಗಳು ದಾಳಿ (RAID) ನಡೆಸಿದ್ದಾರೆ. ಮರಳು ಸಾಗಣೆಗೆ ಅವಕಾಶ ಮಾಡಿಕೊಟ್ಟ ತೋಟದ ಮಾಲೀಕರ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮರಳು ಗಣಿಗಾರಿಕೆ ಸಾರ್ವಜನಿಕರಿಂದ ನಿರಂತರ ದೂರುಗಳ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆಗೆ ದಾಳಿ ನಡೆಸಿದ್ದರು. ಅಧಿಕಾರಿಗಳನ್ನು ನೋಡಿ ಕೆಲಸ ಮಾಡುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪರಿಶೀಲನೆ ನಡೆಸಿದಾಗ ತುಂಗ ಭದ್ರ ನದಿ ಪಕ್ಕದಲ್ಲಿರುವ ಎರಡು ತೋಟಗಳ ಮೂಲಕ ಮರಳು ತುಂಬಿಕೊಂಡು ವಾಹನಗಳು ತೆರಳಲು ದಾರಿ ಮಾಡಿಕೊಡಲಾಗಿತ್ತು. ಈ ಮೊದಲೆ ಜಮೀನು ಮಾಲೀಕರಿಗೆ ನೊಟೀಸ್ ನೀಡಿ, ಟ್ರಂಚ್ ನಿರ್ಮಿಸಲಾಗಿತ್ತು. ಆದರೂ ತೋಟದ ಮೂಲಕ ಮರಳು ಸಾಗಣೆ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆ, ರಾತ್ರಿ ವೇಳೆ ಕಡು ಕತ್ತಲೆ, ರೋಡಲ್ಲೆ ಪಾರ್ಟಿ, ನಿವಾಸಿಗಳಿಗೆ ಭೀತಿ
ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಅವರ ದೂರಿನ ಆಧಾರದಲ್ಲಿ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















