ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JUNE 2024
SAGARA : ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್ಗೆ ತೆರಳಿ ರೋಗಿಗಳು, ಅವರ ಸಂಬಂಧಿ ಜೊತೆಗೆ ಮಾತನಾಡಿದರು. ಬಳಿಕ ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. ಈ ಸಂದರ್ಭ ಕೆಲ ವೈದ್ಯರು ವಿಳಂಬವಾಗಿ ಹಾಜರಾಗುತ್ತಿರುವ ವಿಚಾರ ತಿಳಿದು ತರಾಟೆಗೆ ತೆಗೆದುಕೊಂಡರು.
11 ಗಂಟೆಯಾದರೂ ಬರುವುದಿಲ್ಲ
ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕೆಲವು ವೈದ್ಯರು ಬೆಳಗ್ಗೆ 11 ಗಂಟೆಯಾದರೂ ಕರ್ತವ್ಯಕ್ಕೆ ಹಾಜರಾಗದ ಕುರಿತು ನನ್ನ ಗಮನಕ್ಕೆ ಬಂದಿದೆ. ಅಂತಹ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇದು ಪುನರಾವರ್ತನೆಯಾದರೆ ಅಮಾನತು ಮಾಡಲಾಗುತ್ತದೆ ಎಂದರು ಎಚ್ಚರಿಸಿದರು.
ಮುತುವರ್ಜಿಯಿಂದ ಕೆಲಸ ಮಾಡಿ
ಡೆಂಗ್ಯು ಪ್ರಕರಣಗಳು ಹೆಚ್ಚಾಗಿವೆ. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿತ್ಯ 20 ರಿಂದ 30 ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಸಂದರ್ಭ ವೈದ್ಯರು ಮತ್ತು ಸಿಬ್ಬಂದಿ ಹೆಚ್ಚು ಮುತುವರ್ಜಿಯಿಂದ ಕೆಲಸ ಮಾಡಬೇಕು. ಉತ್ತಮ ಚಿಕಿತ್ಸೆ ಕಾರಣಕ್ಕೆ ಶಿಕಾರಿಪುರ, ಸೊರಬ ಸೇರಿ ಸುತ್ತಮುತ್ತಲ ತಾಲೂಕಿನ ಜನರು ಇಲ್ಲಿಗೆ ಚಿಕಿತ್ಸೆಗೆ ಬರುತ್ತಿದ್ದಾರೆ. ಆದ್ದರಿಂದ ವೈದ್ಯರ ಮೇಲೆ ಒತ್ತಡವಿದೆ ಎಂದು ತಿಳಿಸಿದರು.

ಸಿವಿಲ್ ಸರ್ಜನ್ ಡಾ. ಕೆ.ಪರಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ, ತಾರಾಮೂರ್ತಿ, ಅಶೋಕ್ ಬೇಳೂರು, ರವಿಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
LATEST NEWS
- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

About The Editor
ನಿತಿನ್ ಆರ್.ಕೈದೊಟ್ಲು





