ಶಿವಮೊಗ್ಗದಲ್ಲಿ ಹಂದಿ ಕಂಡರೆ ಕಾನೂನು ಕ್ರಮ, ಮೂರು ದಿನದ ಗಡುವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 13 JUNE 2024

SHIMOGA : ನಗರದಲ್ಲಿ ಹಂದಿಗಳ (Pig) ಹಾವಳಿಗೆ ಜನ ಬೇಸತ್ತಿದ್ದಾರೆ. ಈ ಮಧ್ಯೆ ಹಂದಿ ಸಾಗಣೆಕಾದರರಿಗೆ ಮಹಾನಗರ ಪಾಲಿಕೆ ಖಡಕ್‌ ಎಚ್ಚರಿಕೆ ನೀಡಿದೆ. ಮೂರು ದಿನದಲ್ಲಿ ಹಂದಿಗಳನ್ನು ಖಾಲಿ ಮಾಡದೆ ಇದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಗಡುವು ನೀಡಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಮಹಾನಗರ ಪಾಲಿಕೆ ಆಯುಕ್ತರು ವಿವಿಧೆಡೆ ಭೇಟಿ ನೀಡಿದ್ದ ಸಂದರ್ಭ ಹಂದಿ ಸಾಕಣೆ ವಿರು‍ದ್ಧ ಸಾರ್ವಜನಿಕರು, ಜನಪ್ರತಿನಿಧಿಗಳು ದೂರು ನೀಡಿದ್ದರು. ಹಂದಿಗಳಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಗಡುವು ನಿಗದಿಪಡಿಸಲಾಗಿದೆ.

ಈ ಮೊದಲೆ ಎಚ್ಚರಿಕೆ ನೀಡಲಾಗಿತ್ತು

ಹಂದಿ ಸಾಕಣೆ ಮಾಡದಂತೆ ಮಹಾನಗರ ಪಾಲಿಕೆ ಅನೇಕ ಬಾರಿ ತಿಳಿವಳಿಕೆ ನೀಡಿದೆ. ಹಾಗಿದ್ದೂ ಹಂದಿ ಸಾಕಣೆ ಮಾಡಲಾಗುತ್ತಿದೆ. ಸಾರ್ವಜನಿಕ ಹಿತದೃಷ್ಟಿಯ ಹಿನ್ನೆಲೆ ಇನ್ನು ಮೂರು ದಿನದಲ್ಲಿ ಹಂದಿಗಳನ್ನು ತೆರವು ಮಾಡಬೇಕು. ಇಲ್ಲವಾದಲ್ಲಿ ಬೀಡಾಡಿ ಹಂದಿಗಳೆಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಕಾರು, ಬೈಕ್‌ ಮುಖಾಮುಖಿ ಡಿಕ್ಕಿ, ಮೂವರು ಯುವಕರ ಸ್ಥಿತಿ ಗಂಭೀರ

Leave a Comment