ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JUNE 2024
SHIMOGA : ಬಿಜೆಪಿ ರಾಜ್ಯ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನಪ್ರಕಾಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಗೋಪಿ ಸರ್ಕಲ್ನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ, ಹೃದಯಾಘಾತ ಸಂಭವಿಸಿದೆ. ಎಂ.ಬಿ.ಭಾನುಪ್ರಕಾಶ್ ಅವರ ಕೊನೆ ಕ್ಷಣದ (Last Moments) ಕುರಿತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿ.ಎಸ್.ಅರುಣ್ ಹೇಳಿದ್ದೇನು?
ಮ್ಯಾಕ್ಸ್ ಆಸ್ಪತ್ರೆ ಮುಂಭಾಗ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಎಸ್.ಅರುಣ್, ‘ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ಇವತ್ತು ಬಿಜೆಪಿ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಶಿವಪ್ಪನಾಯಕ ವೃತ್ತದಿಂದ ಅಣಕು ಶವಯಾತ್ರೆ ಮಾಡಿದ್ದೆವು. ಎಂ.ಬಿ.ಭಾನಪ್ರಕಾಶ್ ಮತ್ತು ನಾನು ಅವರು ಅಣಕು ಶವಯಾತ್ರೆಯ ನೇತೃತ್ವ ವಹಿಸಿದ್ದೆವು. ಮಧ್ಯಾಹ್ನ 12.30ರ ಹೊತ್ತಿಗೆ ಪ್ರತಿಭಟನೆ ಮುಗಿಯಿತು. ಎಲ್ಲರು ಹೊರಡಲು ಸಿದ್ಧವಾಗಿದ್ದೆವು.ʼ
‘ಕಾರು ಹತ್ತುವ ವೇಳೆ ಅವರು ತುಂಬಾ ಸುಸ್ತಾಗುತ್ತಿದೆ ಎಂದರು. ಕಾರಿಗೆ ಹತ್ತುವಾಗಲೆ ಕುಸಿದರು. ಕೂಡಲೆ ಅವರನ್ನು ಅದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದೆವು. ಪರೀಕ್ಷೆ ಮಾಡಿದ ವೈದ್ಯರು, ಅವರು ಜೀವ ಬಟ್ಟು ಏಳೆಂಟು ನಿಮಿಷ ಆಗಿದೆ ಎಂದರು. ನಮಗೆಲ್ಲ ಮಾರ್ಗದರ್ಶನ ಮಾಡಿದ್ದರು. ದೊಡ್ಡ ಸಂಖ್ಯೆಯ ಕಾರ್ಯಕರ್ತರಿಗೆ ನೋವಾಗಿದೆʼ ಎಂದರು
ಇದನ್ನೂ ಓದಿ – ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ಗೆ ಹೃದಯಾಘಾತ, ನಿಧನ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















