SHIVAMOGGA LIVE NEWS | 23 JUNE 2024
HOSANAGARA : ಅಬ್ಬಿ ಫಾಲ್ಸ್ನಲ್ಲಿ (Abbi Falls) ಕಾಲು ಜಾರಿ ಬಿದ್ದು ಯುವಕ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬಿ ಫಾಲ್ಸ್ನಲ್ಲಿ ಬಳ್ಳಾರಿ ಮೂಲದ ವಿನೋದ್ (26) ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ತನ್ನ ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ಗೆ ಪ್ರವಾಸಕ್ಕೆ ಬಂದಿದ್ದರು. ಕೊಡಚಾದ್ರಿ ಪ್ರವಾಸ ಮುಗಿಸಿದ್ದ ತಂಡ ಅಬ್ಬಿ ಫಾಲ್ಸ್ಗೆ ಆಗಮಿಸಿದ್ದಾಗ ಆವಘಡ ಸಂಭಿವಿಸಿದೆ.
ನಿರ್ಬಂಧವಿದ್ದರು ಫಾಲ್ಸ್ಗೆ ಹೋಗಿದ್ದರು
ಕಳೆದ ವರ್ಷ ಅಬ್ಬಿ ಫಾಲ್ಸ್ನಲ್ಲಿ ಮುಳುಗಿ ವ್ಯಕ್ತಿ ಮೃತಪಟ್ಟಿದ್ದರು. ಮಳೆ ಜಾಸ್ತಿಯಾದ ಹಿನ್ನೆಲೆ ಅಬ್ಬಿ ಫಾಲ್ಸ್ಗೆ ಪ್ರವಾಸಿಗರು ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೂ ಬೆಂಗಳೂರಿನಿಂದ ಬಂದ ಪ್ರವಾಸಿಗರು ಟಿಟಿ ವಾಹನ ನಿಲ್ಲಿಸಿ ಸುಮಾರು ಒಂದೂವರೆ ಕಿ.ಮೀ ನಡೆದು ಹೋಗಿದ್ದರು. ಘಟನೆ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ವಿನೋದ್ಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200