ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JUNE 2024
NATIONAL UPDATE : ಪಶ್ಚಿಮ ಬಂಗಾಳದಲ್ಲಿನ ರೈಲು ಅಪಘಾತ ಬೆನ್ನಿಗೆ ಶೀಘ್ರ ಮತ್ತು ಯೋಜಿತ ರೂಪದಲ್ಲಿ ಕವಚ (Kavach) ತಂತ್ರಜ್ಞಾನ ಅಳವಡಿಕೆಗೆ ಕೇಂದ್ರ ರೈಲ್ವೆ ಇಲಾಖೆಯು ಅಧಿಕಾರಿಗಳಿಗೆ ಸೂಚನೆ ನೀಡಿದೆ. ದೆಹಲಿಯಲ್ಲಿ ವಿಶೇಷ ಸಭೆ ನಡೆಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕವಚ ತಂತ್ರಜ್ಞಾನವನ್ನು ಶೀಘ್ರ ಅಳವಡಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನು ಐದು ವರ್ಷದಲ್ಲಿ 44 ಸಾವಿರ ಕಿ.ಮೀ. ರೈಲ್ವೆ ಮಾರ್ಗವನ್ನು ಕವಚ ವ್ಯಾಪ್ತಿಗೆ ತರಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 2025ರ ಒಳಗೆ ದೆಹಲಿ – ಮುಂಬೈ ಮತ್ತು ದೆಹಲಿ – ಹೌರಾ ಮಾರ್ಗದಲ್ಲಿ ಕವಚ ತಂತ್ರಜ್ಞಾನ ಅಳವಡಿಸಲಾಗುತ್ತದೆ. ಮತ್ತೆ 6 ಸಾವಿರ ಕಿ.ಮೀ ವ್ಯಾಪ್ತಿಗೆ ತಂತ್ರಜ್ಞಾನ ಅಳವಡಿಕೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್.
ರೈಲುಗಳು ಮುಖಾಮುಖಿ ಡಿಕ್ಕಿ ತಪ್ಪಿಸಲು ಕವಚ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಇದನ್ನು ದೇಶಾದ್ಯಂತ ಅಳವಡಿಸುವ ಕೆಲಸ ಆಗಬೇಕಿದೆ. ಇನ್ನು, ಕವಚ ತಂತ್ರಜ್ಞಾನದ ಉಪಕರಣಗಳ ಉತ್ಪಾದನೆ ಪ್ರಕ್ರಿಯೆ ಬಿರುಸಾಗಿದೆ. ಹಂತ ಹಂತವಾಗಿ ಇನ್ನು ಐದು ವರ್ಷದಲ್ಲಿ 44 ಸಾವಿರ ಕಿ.ಮೀ.ಗೆ ಈ ತಂತ್ರಜ್ಞಾನ ಅಳವಡಿಸುವ ಗುರಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ವರದಿಯಾಗಿದೆ.
ನಾನಾ ರಾಷ್ಟ್ರಗಳಲ್ಲಿ 1980ರ ದಶಕದಲ್ಲಿಯೇ ರೈಲ್ವೆ ಡಿಕ್ಕಿ ತಡೆ ತಂತ್ರಜ್ಞಾನ ಅಳವಡಿಸಲಾಗಿತ್ತು. ಭಾರತದಲ್ಲಿ 2016ರ ನಂತರ ಈ ತಂತ್ರಜ್ಞಾನ ಅಳವಡಿಕೆ ಪ್ರಕ್ರಿಯೆ ಆರಂಭವಾಗಿತ್ತು. 2019ರಲ್ಲಿ ಕವಚ ತಂತ್ರಜ್ಞಾನದ ಪರೀಕ್ಷೆ ನಡೆಯಿತು. 2020ರಲ್ಲಿ ಕವಚ ತಂತ್ರಜ್ಞಾನ ಅಳವಡಿಕೆಗೆ ಅನುಮತಿ ದೊರೆತಿದೆ.
ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















